Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾವ ಹಿಂದುತ್ವನು ಇಲ್ಲ ಏನಿಲ್ಲ, ಎಲ್ಲಾ ನಕಲಿ ; ರೇಣುಕಾಚಾರ್ಯ ಗುಡುಗಿದ್ದೇಕೆ..?

---Advertisement---

ಶಿವಮೊಗ್ಗ; ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಇನ್ನಿಲ್ಲದ ಸದ್ದು ಮಾಡ್ತಾ ಇದೆ. ಸದನದಲ್ಲೂ ಅದೇ ಚರ್ಚೆ, ಹೊರಗೂ ಅದೇ ಚರ್ಚೆ. ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯತ್ನಾಳ್ ಅವರು ಸದಾ ಕಾಲ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಹೌಹಾರುತ್ತಿದ್ದರು. ಹೀಗಾಗಿ ರೇಣುಕಾಚಾರ್ಯ ಅವರು ಯತ್ನಾಳ್ ಗೆ ಟೀಕೆ ಮಾಡುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದರು. ಇದೀಗ ಹನಿಟ್ರ್ಯಾಪ್ ವಿಚಾರಕ್ಕೆ ಮತ್ತೆ ರೊಚ್ಚಿಗೆದ್ದಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ರೇಣುಕಾಚಾರ್ಯ ಅವರು, ಅಧಿವೇಶನದಲ್ಲಿ ಪ್ರಭಾವಿ ಸಚಿವ, ಮುಖ್ಯಮಂತ್ರಿ ಪಕ್ಕದಲ್ಲಿ ಇರುವಂತವರು, ಯತ್ನಾಳ್ ಗೆ ಒಂದು ಚೀಟಿ ಕಳುಹಿಸಿದ್ರು. ಆ ಚೀಟಿ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಚೀಟಿಯನ್ನ ಯಾಕೆ ತಗೊಂಡ್ರಿ..? ಸದನದಲ್ಲಿ ಏನು ಪ್ರಸ್ತಾಪ ಮಾಡಿದ್ರಿ..? ಅಂದ್ರೆ ಆಡಳಿತ ಪಕ್ಷಕ್ಕೆ ನೀವೂ ಏಜೆಂಟ್ ಆಗಿ ಕೆಲಸ ಮಾಡ್ತಾ ಇದ್ದೀರಾ..?

ಮುಖ್ಯಮಂತ್ರಿಗಳ ಆಮಿಷಕ್ಕೆ ಒಳಗಾಗಿ, ಪ್ರತಿಪಕ್ಷದ ಶಾಸಕನಾಗಿ ಕೆಲಸ ಮಾಡದೆ ಆ ಚೀಟಿ ಬಗ್ಗೆ ಪ್ರಸ್ತಾಪ ಮಾಡ್ತೀರ ಅಂದ್ರೆ ನೀವೂ ಆಡಳಿತ ಪಕ್ಷದ ಶಾಸಕರಾ..? ಒಂದು ದಿವಸಾನು ಆ ಮನುಷ್ಯ ಆಡಳಿತ ಪಕ್ಷದ ವೈಫಲ್ಯವನ್ನು, ಭ್ರಷ್ಟಾಚಾರವನ್ನು ಮಾತಾಡಿಲ್ಲ. ಹಾಗಾಗಿ ಅಡ್ಜೆಸ್ಟ್ಮೆಂಟ್ ಪಾರ್ಟಿಗೆ ಸೀದಾ. ಯಾವ ಹಿಂದುತ್ವನು ಇಲ್ಲ ಏನಿಲ್ಲ. ಎಲ್ಲಾ ನಕಲಿ ಹಿಂದುತ್ವ ಎಂದು ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುಡುಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಹನಿಟ್ರ್ಯಾಪ್ ಬಗ್ಗೆ ಅದರಲ್ಲೂ ಆಡಳಿತ ಪಕ್ಷ ನೀಡಿದ ಚೀಟಿ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment