ಯಾವ ಹಿಂದುತ್ವನು ಇಲ್ಲ ಏನಿಲ್ಲ, ಎಲ್ಲಾ ನಕಲಿ ; ರೇಣುಕಾಚಾರ್ಯ ಗುಡುಗಿದ್ದೇಕೆ..?

ಶಿವಮೊಗ್ಗ; ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಇನ್ನಿಲ್ಲದ ಸದ್ದು ಮಾಡ್ತಾ ಇದೆ. ಸದನದಲ್ಲೂ ಅದೇ ಚರ್ಚೆ, ಹೊರಗೂ ಅದೇ ಚರ್ಚೆ. ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯತ್ನಾಳ್ ಅವರು ಸದಾ ಕಾಲ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಹೌಹಾರುತ್ತಿದ್ದರು. ಹೀಗಾಗಿ ರೇಣುಕಾಚಾರ್ಯ ಅವರು ಯತ್ನಾಳ್ ಗೆ ಟೀಕೆ ಮಾಡುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದರು. ಇದೀಗ ಹನಿಟ್ರ್ಯಾಪ್ ವಿಚಾರಕ್ಕೆ ಮತ್ತೆ ರೊಚ್ಚಿಗೆದ್ದಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ರೇಣುಕಾಚಾರ್ಯ ಅವರು, ಅಧಿವೇಶನದಲ್ಲಿ ಪ್ರಭಾವಿ ಸಚಿವ, ಮುಖ್ಯಮಂತ್ರಿ ಪಕ್ಕದಲ್ಲಿ ಇರುವಂತವರು, ಯತ್ನಾಳ್ ಗೆ ಒಂದು ಚೀಟಿ ಕಳುಹಿಸಿದ್ರು. ಆ ಚೀಟಿ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಚೀಟಿಯನ್ನ ಯಾಕೆ ತಗೊಂಡ್ರಿ..? ಸದನದಲ್ಲಿ ಏನು ಪ್ರಸ್ತಾಪ ಮಾಡಿದ್ರಿ..? ಅಂದ್ರೆ ಆಡಳಿತ ಪಕ್ಷಕ್ಕೆ ನೀವೂ ಏಜೆಂಟ್ ಆಗಿ ಕೆಲಸ ಮಾಡ್ತಾ ಇದ್ದೀರಾ..?

ಮುಖ್ಯಮಂತ್ರಿಗಳ ಆಮಿಷಕ್ಕೆ ಒಳಗಾಗಿ, ಪ್ರತಿಪಕ್ಷದ ಶಾಸಕನಾಗಿ ಕೆಲಸ ಮಾಡದೆ ಆ ಚೀಟಿ ಬಗ್ಗೆ ಪ್ರಸ್ತಾಪ ಮಾಡ್ತೀರ ಅಂದ್ರೆ ನೀವೂ ಆಡಳಿತ ಪಕ್ಷದ ಶಾಸಕರಾ..? ಒಂದು ದಿವಸಾನು ಆ ಮನುಷ್ಯ ಆಡಳಿತ ಪಕ್ಷದ ವೈಫಲ್ಯವನ್ನು, ಭ್ರಷ್ಟಾಚಾರವನ್ನು ಮಾತಾಡಿಲ್ಲ. ಹಾಗಾಗಿ ಅಡ್ಜೆಸ್ಟ್ಮೆಂಟ್ ಪಾರ್ಟಿಗೆ ಸೀದಾ. ಯಾವ ಹಿಂದುತ್ವನು ಇಲ್ಲ ಏನಿಲ್ಲ. ಎಲ್ಲಾ ನಕಲಿ ಹಿಂದುತ್ವ ಎಂದು ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುಡುಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಹನಿಟ್ರ್ಯಾಪ್ ಬಗ್ಗೆ ಅದರಲ್ಲೂ ಆಡಳಿತ ಪಕ್ಷ ನೀಡಿದ ಚೀಟಿ ಬಗ್ಗೆ ಪ್ರಸ್ತಾಪಿಸಿದ್ದಾರೆ.

suddionenews

Recent Posts

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…

36 minutes ago

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…

8 hours ago

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

    ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…

8 hours ago

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

  ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…

11 hours ago

ಸಿದ್ದರಾಮಯ್ಯ ನಿರ್ಧಾರಕ್ಕೆ ಧಾರವಾಡ ಹೈಕೋರ್ಟ್ ತಡೆ‌‌‌‌‌‌…!

ಹುಬ್ಬಳ್ಳಿ; ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ…

11 hours ago