Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಮೈಮೇಲೆ ಆಗಿರುವ ಗಾಯಗಳಿಂದ ರಕ್ತಸ್ರಾವ ಆಗುವುದಕ್ಕೆ ಸಾಧ್ಯವೇ ಇಲ್ಲ : ದರ್ಶನ್ ಪರ ವಕೀಲರ ವಾದವೇನು..?

Facebook
Twitter
Telegram
WhatsApp

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಾದ ಮಂಡಿಸುತ್ತಿರುವ ವಕೀಲ ನಾಗೇಶ್ ಅವರು, ಪೊಲೀಸರು ನೀಡಿರುವ ಸಾಕ್ಷಿಗಳೇ ಸುಳ್ಳೆಂದು ವಾದ ಮಂಡಿಸುತ್ತಿದ್ದಾರೆ. ಇಂದು ಕೂಡ ಕೋರ್ಟ್ ನಲ್ಲಿ ವಾದ ಮಂಡಿಸಿರುವ ನಾಗೇಶ್ ಅವರು, ಟವರ್ ಲೊಕೇಷನ್, ರೇಣುಕಾಸ್ವಾಮಿ ದೇಹದಲ್ಲಿ ರಕ್ತಸ್ರಾವವಾಗಿದ್ದು ಈ ಎಲ್ಲವೂ ಸುಳ್ಳೆಂದೆ ವಾದಿಸಿದ್ದಾರೆ.

ಸಿವಿ ನಾಗೇಶ್ ಅವರು ಸಾಕ್ಷಿಯೊಬ್ಬನ ಹೇಳಿಕೆಯನ್ನು ತಡವಾಗಿ ದಾಖಲು ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಸಾಕ್ಷಿಗಳ ಟವರ್ ಲೋಕೇಷನ್, ಸಾಕ್ಷಿಯೊಬ್ಬನ ಹೇಳಿಕೆಯನ್ನು ತಡವಾಗಿ ದಾಖಲಿದ್ದಾರೆ. ಮರಣೋತ್ತರ ವರದಿ ಬಂದ ಬಳಿಕ ಆ ವರದಿಯನ್ನು ಪುರಸ್ಕರಿಸುವಂತೆ ಸಾಕ್ಷಿಯಿಂದ ಹೇಳಿಕೆಯನ್ನು ಪೊಲೀಸರು ಪಡೆದಿದ್ದಾರೆ. ಇದು ಪ್ಲಾಂಟ್ ಮಾಡಲಾದ ಸಾಕ್ಷಿ. ಆ ಸಾಕ್ಷಿ ತಿರುಪತಿ, ಗೋವಾ, ಹಾಸನ ಎಲ್ಲೆಲ್ಲೋ ಓಡಾಡಿದ್ದಾನೆ ಎಂದು ಪೊಲೀಸರು ಹೇಳಿರುವುದು ಸುಳ್ಳು. ಆ ಸಾಕ್ಷಿ ಬೆಂಗಳೂರಿನಲ್ಲಿಯೇ ಇದ್ದ. ಆದರೆ ಮರಣೋತ್ತರ ವರದಿ ಬರುವ ತನಕ ಕಾದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಅದಕ್ಕೆ ಹೋಲಿಕೆಯಾಗುವಂತೆ ಹೇಳಿಕೆಯನ್ನು ಪಡೆಯಲಾಗಿದೆ.

ಇದನ್ನು ಮುಚ್ಚಿಡಲೆಂದೇ ರಿಮ್ಯಾಂಡ್ ಅರ್ಜಿಯನ್ನು ನೀಡಲಾಗಿರಲಿಲ್ಲ ಹಾಗೂ ಕೇಸ್ ಡೈರಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಪ್ರತ್ಯಕ್ಷ ಸಾಕ್ಷಿ ಬಿಟ್ಟರೆ ಬೇರೆ ಸಾಕ್ಷಿಯೇ ಇಲ್ಲ. ಇದನ್ನು ಬಿಟ್ಟರೆ ಕೃತ್ಯ ಸಾಬೀತುಪಡಿಸುವಂತ ಒಂದಂಶವೂ ಇಲ್ಲ. ಹಾಗಾಗಿ ಸಾಕ್ಷಿಯನ್ನು ಪ್ಲಾಂಟ್ ಮಾಡಲಾಗಿದೆ. ರೇಣುಕಾಸ್ವಾಮಿ ಮೈಮೇಲೆ 1.25 ಸೆಂಟಿ ಮೀಟರ್ ಗಾಯಗಳಾಗಿವೆ. ಇವುಗಳಿಂದ ಹೆಚ್ಚು ರಕ್ತಸ್ರಾವ ಆಗುವುದೇ ಇಲ್ಲ. ಆದರೆ ಪೊಲೀಸರು ಉದ್ದೇಶಪೂರ್ವಕವಾಗಿಯೇ ರಕ್ತಸ್ರಾವವಾಗಿದೆ, ಕೋಲು, ಬಟ್ಟೆಗಳ ಮೇಲೆ ರಕ್ತದ ಕಲೆಗಳಿದಾವೆ ಎಂದಿದ್ದಾರೆ ಎಂದು ನಾಗೇಶ್ ಅವರು ವಾದ ಮಂಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!