Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮೂರಿನ ದೇವಸ್ಥಾನದಲ್ಲಿ ವೈಬ್ರೇಷನ್ ಇರುತ್ತೆ, ಭಕ್ತಿ ತುಂಬಿರುತ್ತೆ.. ಆದರೆ ಅಲ್ಲಿ : ಅಯೋಧ್ಯೆ ಬಗ್ಗೆ ಹಿಂದಿನ ಘಟನೆ ಹೇಳಿದ ಸಚಿವ ರಾಜಣ್ಣ

---Advertisement---

ತುಮಕೂರು: ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. 22ರಂದು ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿ ಅವರು ಈಗಾಗಲೇ ಉಪವಾಸ ಕೈಗೊಂಡಿದ್ದಾರೆ. ಇದೀಗ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಅಯೋಧ್ಯೆಯ ಬಗ್ಗೆ ಮಾತನಾಡಿದ್ದು, ಅಂದು ಯಾವ ರೀತಿಯ ಫೀಲ್ ಇತ್ತು ಎಂಬುದನ್ನು ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ, ನಾವೂ ನಮ್ಮೂರಿನ ದೇವಸ್ಥಾನಕ್ಕೆ ಹೋದರೆ ಅಲ್ಲೊಂದು ವೈಬ್ರೇಷನ್ ಇರುತ್ತದೆ. ಭಕ್ತಿ ತುಂಬಿ ಬರುತ್ತದೆ. ಆದರೆ ಅಲ್ಲಿ ನನಗೇನು ಅನ್ನಿಸಲೇ ಇಲ್ಲ. ಟೂರಿಂಗ್ ಟಾಕೀಸ್ ನಲ್ಲಿ ಗೊಂಬೆ ಇಟ್ಟಿದ್ದಾರೆ ಎಂಬ ಫೀಲ್ ಬಂತು. ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಎರಡು ಗೊಂಬೆಯಿಟ್ಟು ಇದೇ ರಾಮ ಎಂದು ಹೇಳಿದ್ದರು. ಈಗ ಏನು ಮಾಡಿದ್ದಾರೋ ಗೊತ್ತಿಲ್ಲ. ಹೋದಾಗ ನೋಡಬೇಕು ಎಂದಿದ್ದಾರೆ.

 

ಈಗೆಲ್ಲಾ ಶ್ರೀರಾಮನ ದೇವಸ್ಥಾನ ಕಟ್ಟಿಸುತ್ತಿದ್ದಾರೆ ಅಲ್ಲಿ. ಶ್ರೀರಾಮ ಎಲ್ಲಾ ದೇವರನ್ನು ಆಶೀರ್ವದಿಸುವ ದೇವರು. ಅದಕ್ಕೋಸ್ಕರನೇ ರಾಮರಾಜ್ಯದ ಕಲ್ಪನೆ ಬಂದಿದ್ದು. ಈಗ ಬಿಜೆಪಿ ರಾಮನೋ, ಮೋದಿ ಶ್ರೀರಾಮನೋ ಎಂಬುದನ್ನು ಮುಂದೆ ನೋಡೋಣಾ. ನಮ್ಮೂರಲ್ಲೂ ನೂರಾರು ವರ್ಷ ಇತಿಹಾಸವಿರುವ ಪಾವಿತ್ರ್ಯವಾಗಿರುವ ಶ್ರೀರಾಮನ ದೇವಸ್ಥಾಗಳಿವೆ. ಆದರೆ ಅದನ್ನೆಲ್ಲಾ ಬಿಟ್ಟು ಈಗ ಅದನ್ನೆಲ್ಲಾ ಬಿಟ್ಟು ಚುನಾವಣೆಗೋಸ್ಕರ ದೇವಸ್ಥಾನಗಳನ್ನು ಕಟ್ಟಿಸಿ, ಜನರಿಗೆ ಮೋಸ ಮಾಡುತ್ತಿದ್ದಾರೆ. ಜನರ ಭಾವನೆಗಳನ್ನು, ಎಲ್ಲವನ್ನು ಕೇಳುತ್ತಾರೆಂದು ಕೆಟ್ಟ ದಾರಿಗೆ ತೆಗೆದುಕೊಂಡು ಹೋಗಬಾರದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment