Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆಯಲ್ಲಿ ಒಡಕು ಇರಬಾರದು : ಕೃಷ್ಣಾ ಡಿ.ನಾಯ್ಕ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.09 : ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಿಕೊಂಡು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆಯಲ್ಲಿ ಒಡಕು ಇರಬಾರದು ಎಂದು ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಕೃಷ್ಣಾ ಡಿ.ನಾಯ್ಕ ಪಡಿತರ ನ್ಯಾಯಬೆಲೆ ಅಂಗಡಿ ಮಾಲೀಕರುಗಳಿಗೆ ಕರೆ ನೀಡಿದರು.

ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

ನ್ಯಾಯಬೆಲೆ ಅಂಗಡಿ ಮಾಲೀಕರುಗಳ ಸಮಸ್ಯೆಗಳನ್ನು ನಿವಾರಿಸುವಂತೆ ಆಹಾರ ಸಚಿವರಿಗೆ ಈಗಾಗಲೆ ಸಾಕಷ್ಟು ಬಾರಿ ಗಮನ ಸೆಳೆಯಲಾಗಿದೆ. ಪಡಿತರ ಅಂಗಡಿ ಮಾಲೀರಕಗಳ ನಡುವೆ ಯಾವುದೇ ಜಾತಿ ತಾರತಮ್ಯ ಇರಬಾರದು. ಯಾರಿಗೆ ತೊಂದರೆಯಾದರೂ ಒಗ್ಗಟ್ಟಿನಿಂದ ಹೋರಾಡಿದಾಗ ಮಾತ್ರ ನ್ಯಾಯ ಪಡೆಯಲು ಸಾಧ್ಯ. ಒಂದು ಸಾವಿರ ಪಡಿತರ ಚೀಟಿಯಿರುವ ಯಾವುದೇ ಸೊಸೈಟಿಯನ್ನು ವಿಭಜನೆ ಮಾಡಬಾರದು. ಎರಡು ಗುಂಪುಗಳಾಗುವುದು ಬೇಡ. ಕಡ್ಡಾಯವಾಗಿ ಸದಸ್ಯತ್ವ ಪಡೆದುಕೊಳ್ಳಿ. ನಿರ್ಲಕ್ಷೆ ತೋರಬೇಡಿ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ಡಿ.ಎಮ್.ಹಾಲಸ್ವಾಮಿ ಮಾತನಾಡಿ ಸಂಘದ ಎದುರು ಅನೇಕ ಸಮಸ್ಯೆ ಸವಾಲುಗಳಿವೆ. ಹಾಗಾಗಿ ಪಡಿತರ ನ್ಯಾಯಬೆಲೆ ಅಂಗಡಿಗಳವರು ಒಗ್ಗಟ್ಟಾಗಿರಬೇಕು. ಯಾವುದೇ ಕಾರಣಕ್ಕೂ ಭಿನ್ನಾಭಿಪ್ರಾಯವಿರಬಾರದು. ಹೋರಾಟದಿಂದ ಮಾತ್ರ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದು ಎಂದು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಶಿ ಮಾತನಾಡುತ್ತ ಸಂಘಟನೆಯಲ್ಲಿ ಯಾವುದೇ ಬಿರುಕು ಬರಬಾರದೆಂದರೆ ಹೊಂದಾಣಿಕೆ ಮುಖ್ಯ. ನ್ಯಾಯಬೆಲೆ ಅಂಗಡಿ ನಡೆಸುತ್ತಿರುವವರಿಗೆ ಆಹಾರ ಇಲಾಖೆಯವರು ವಿನಾ ಕಾರಣ ತೊಂದರೆ ಕೊಟ್ಟರೆ ಸಂಘದ ಗಮನಕ್ಕೆ ತನ್ನಿ. ಆಗ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದರು.

ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ಸಹ ಕಾರ್ಯದರ್ಶಿ ರಾಜುಗೊಂದಿ ಮಾತನಾಡಿ ಸಂಘಟನೆ ಎಂದ ಮೇಲೆ ಸಣ್ಣಪುಟ್ಟ ಲೋಪಗಳಿರುವುದು ಸಹಜ. ಒಗ್ಗಟ್ಟಿನಿಂದ ಇದ್ದರೆ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದು. ನ್ಯಾಯಬೆಲೆ ಅಂಗಡಿ ಮಾಲೀಕರುಗಳು ಒಂದಾಗಿದ್ದರೆ ಸಮಸ್ಯೆ ಬಗೆಹರಿದಂತೆ ಎಂದರು.  ನಗರಾಧ್ಯಕ್ಷ ಭೀಮಣ್ಣ, ನಗರದ ನ್ಯಾಯಬೆಲೆ ಅಂಗಡಿ ಮಾಲೀಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...