Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆಯಲ್ಲಿ ಒಡಕು ಇರಬಾರದು : ಕೃಷ್ಣಾ ಡಿ.ನಾಯ್ಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.09 : ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಿಕೊಂಡು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆಯಲ್ಲಿ ಒಡಕು ಇರಬಾರದು ಎಂದು ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಕೃಷ್ಣಾ ಡಿ.ನಾಯ್ಕ ಪಡಿತರ ನ್ಯಾಯಬೆಲೆ ಅಂಗಡಿ ಮಾಲೀಕರುಗಳಿಗೆ ಕರೆ ನೀಡಿದರು.

ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

ನ್ಯಾಯಬೆಲೆ ಅಂಗಡಿ ಮಾಲೀಕರುಗಳ ಸಮಸ್ಯೆಗಳನ್ನು ನಿವಾರಿಸುವಂತೆ ಆಹಾರ ಸಚಿವರಿಗೆ ಈಗಾಗಲೆ ಸಾಕಷ್ಟು ಬಾರಿ ಗಮನ ಸೆಳೆಯಲಾಗಿದೆ. ಪಡಿತರ ಅಂಗಡಿ ಮಾಲೀರಕಗಳ ನಡುವೆ ಯಾವುದೇ ಜಾತಿ ತಾರತಮ್ಯ ಇರಬಾರದು. ಯಾರಿಗೆ ತೊಂದರೆಯಾದರೂ ಒಗ್ಗಟ್ಟಿನಿಂದ ಹೋರಾಡಿದಾಗ ಮಾತ್ರ ನ್ಯಾಯ ಪಡೆಯಲು ಸಾಧ್ಯ. ಒಂದು ಸಾವಿರ ಪಡಿತರ ಚೀಟಿಯಿರುವ ಯಾವುದೇ ಸೊಸೈಟಿಯನ್ನು ವಿಭಜನೆ ಮಾಡಬಾರದು. ಎರಡು ಗುಂಪುಗಳಾಗುವುದು ಬೇಡ. ಕಡ್ಡಾಯವಾಗಿ ಸದಸ್ಯತ್ವ ಪಡೆದುಕೊಳ್ಳಿ. ನಿರ್ಲಕ್ಷೆ ತೋರಬೇಡಿ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ಡಿ.ಎಮ್.ಹಾಲಸ್ವಾಮಿ ಮಾತನಾಡಿ ಸಂಘದ ಎದುರು ಅನೇಕ ಸಮಸ್ಯೆ ಸವಾಲುಗಳಿವೆ. ಹಾಗಾಗಿ ಪಡಿತರ ನ್ಯಾಯಬೆಲೆ ಅಂಗಡಿಗಳವರು ಒಗ್ಗಟ್ಟಾಗಿರಬೇಕು. ಯಾವುದೇ ಕಾರಣಕ್ಕೂ ಭಿನ್ನಾಭಿಪ್ರಾಯವಿರಬಾರದು. ಹೋರಾಟದಿಂದ ಮಾತ್ರ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದು ಎಂದು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಶಿ ಮಾತನಾಡುತ್ತ ಸಂಘಟನೆಯಲ್ಲಿ ಯಾವುದೇ ಬಿರುಕು ಬರಬಾರದೆಂದರೆ ಹೊಂದಾಣಿಕೆ ಮುಖ್ಯ. ನ್ಯಾಯಬೆಲೆ ಅಂಗಡಿ ನಡೆಸುತ್ತಿರುವವರಿಗೆ ಆಹಾರ ಇಲಾಖೆಯವರು ವಿನಾ ಕಾರಣ ತೊಂದರೆ ಕೊಟ್ಟರೆ ಸಂಘದ ಗಮನಕ್ಕೆ ತನ್ನಿ. ಆಗ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದರು.

ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ದಿ ಸಂಘದ ಸಹ ಕಾರ್ಯದರ್ಶಿ ರಾಜುಗೊಂದಿ ಮಾತನಾಡಿ ಸಂಘಟನೆ ಎಂದ ಮೇಲೆ ಸಣ್ಣಪುಟ್ಟ ಲೋಪಗಳಿರುವುದು ಸಹಜ. ಒಗ್ಗಟ್ಟಿನಿಂದ ಇದ್ದರೆ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದು. ನ್ಯಾಯಬೆಲೆ ಅಂಗಡಿ ಮಾಲೀಕರುಗಳು ಒಂದಾಗಿದ್ದರೆ ಸಮಸ್ಯೆ ಬಗೆಹರಿದಂತೆ ಎಂದರು.  ನಗರಾಧ್ಯಕ್ಷ ಭೀಮಣ್ಣ, ನಗರದ ನ್ಯಾಯಬೆಲೆ ಅಂಗಡಿ ಮಾಲೀಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!