ಸುದ್ದಿಒನ್, ಹಿರಿಯೂರು, ಮೇ. 11 : ಯುದ್ಧ ಯಾವುದಕ್ಕೂ ಪರಿಹಾರವಲ್ಲ. ಆದರೆ ನಿರಂತರವಾಗಿ ಭಯೋತ್ಪಾದಕ ದಾಳಿಗಳಿಗೆ ಒಳಗಾಗಿ ಸಾವು ನೋವುಗಳನ್ನು ಕಂಡ ದೇಶ ನಮ್ಮದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಬೇಸರ ವ್ಯಕ್ತಪಡಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಹಲ್ಗಾಮ್ ದಾಳಿ ಮಾಡುವ ಮೂಲಕ ಪಾಕಿಸ್ತಾನ ಭಾರತವನ್ನು ಯುದ್ಧಕ್ಕೆ ಆಹ್ವಾನಿಸಿದಂತಾಗಿದೆ. ಭಯೋತ್ಪಾದಕತೆಯನ್ನು ಬೆಂಬಲಿಸುವ ಪಾಪಿ ಪಾಕಿಸ್ತಾಕ್ಕೆ ಬುದ್ದಿ ಕಲಿಸಲು ಸುಸಮಯವಾಗಿತ್ತು. ಆತುರದ ಕದನ ವಿರಾಮ ನಿರ್ಧಾರ ದೇಶದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಅಷ್ಟಕ್ಕೂ ಕದನ ವಿರಾಮಕ್ಕೆ ಅರ್ಹ ದೇಶವೇ ಅಲ್ಲ ಅದು. ಪಾಕಿಸ್ತಾನದ ಮೇಲೆ ಮತ್ತೊಷ್ಟು ಹೊಡೆತ ಕೊಟ್ಟು, ಭಾರತದ ತಂಟೆಗೆ ಬರದಂತೆ ಎಚ್ಚರಿಕೆ ಕೊಟ್ಟು ಆನಂತರ ಕದನ ವಿರಾಮ ಘೋಷಣೆ ಮಾಡಬಹುದಿತ್ತು ಎಂದು ಅವರು ಹೇಳಿದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





