Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

250 ಮಕ್ಕಳಿದ್ದರು ಮೇಲ್ಛಾವಣಿ ಸರಿ ಇಲ್ಲ.. ಮಳೆ ಬಂದರೂ ನೆನೆದುಕೊಂಡೆ ಪಾಠ ಕೇಳಬೇಕು, ಹೇಳಬೇಕು..!

Facebook
Twitter
Telegram
WhatsApp

 

ವಿಜಯಪುರ: ಸರ್ಕಾರಿ ಶಾಲೆಗಳು ಮಕ್ಕಳು ಬಾರದೆ ಎಷ್ಟೋ ಕಡೆ ಮುಚ್ಚಿ ಹೋಗುತ್ತಿವೆ. ಇಂಥ ಸಂದರ್ಭದಲ್ಲಿ ಇರುವಷ್ಟು ಶಾಲೆಗಳಿಗಾದರೂ ಮೂಲಭೂತ ಸೌಕರ್ಯ ಒದಗಿಸಿಕೊಡುವತ್ತ ಸರ್ಕಾರ ಗಮನ ಹರಿಸದೆ ಇರುವುದು ಬೇಸರದ ಸಂಗತಿಯಾಗಿದೆ. ವಿಜಯಪುರ ಜಿಲ್ಲೆಯಲ್ಲೂ ಶಾಲೆಯೊಂದರಲ್ಲಿ ಮೇಲ್ಛಾವಣಿಯೇ ಇಲ್ಲದಂತಾಗಿದೆ. ಅದರಲ್ಲಿಯೇ ಮಕ್ಕಳು ಪಾಠ ಕೇಳುತ್ತಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡಕರಜಗಿ ಗ್ರಾಮದಲ್ಲಿ ಪಾಳು ಬಿದ್ದ ಶಾಲೆಯಲ್ಲಿ ಪಾಠ ನಡೆಯುತ್ತಿದೆ. ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆಯೂ ಇದರ. ಮಳೆಯಿಂದಾಗಿ ಶಾಲೆ ಸೋರುತ್ತಿದೆ. ಆ ಮಳೆ ಹನಿಯಲ್ಲಿಯೇ ಸೋರುವ ಕೊಠಡಿಯಲ್ಲಿಯೇ ಕುಳಿತು ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಸೋರುತ್ತಿರುವ ಶಾಲೆಯಲ್ಲೇ ಪಾಠ ಕೇಳಬೇಕಾದ ಅನಿವಾರ್ಯತೆ ಇದೆ. ಅಧಿಕಾರುಗಳು ಕನಿಷ್ಠ ಪಕ್ಷ ಮೇಲ್ಚಾವಣಿಯೂ ರಿಪೇರಿ ಮಾಡಿಸಿಲ್ಲ. ಮಕ್ಕಳು ಕೂಡ ಮಳೆಯ ನೀರಿನಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ. ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಇದಾಗಿದೆ. ಕಳೆದ ಹಲವು ವರ್ಷಗಳಿಂದ ಈ ಶಾಲಾ ಕಟ್ಟಡ ಹಾಗೂ ಮೆಲ್ಚಾವಣಿ ಹಾಳಾಗಿದೆ. ಮಕ್ಕಳು ಜೀವ ಭಯದಲ್ಲಿ, ನಿಂತ ನೀರಲ್ಲೇ ಪಾಠ ಕೇಳುವಂತಾಗಿದೆ. ಈ ಶಾಲೆಯಲ್ಲಿ ಮಕ್ಕಳೇನು ಕಡಿಮೆ ಇಲ್ಲ 250 ಮಕ್ಕಳಿದ್ದಾರೆ. ಆದರೂ ಶಾಲೆಯ ದುಸ್ಥಿತಿ ಈ ರೀತಿಯಾಗಿದೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!