ಬೆಳಗಾವಿ: ಬಿಜೆಪಿ ನಾಯಕರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡುವುದಕ್ಕೆ ಆಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಬಹಳ ಮುಖ್ಯ. ಆದರೆ ಬಿಜೆಪಿಯವರಿಗೆ ಇದರ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡುವುದಕ್ಕೆ ಸಾಧ್ಯ..? ಬಿಜೆಪಿಗೆ ಕೇವಲ ರಾಜಕಾತಣ ಬೇಕು. ಅವರು ಕೇವಲ ರಾಜಕಾರಣವನ್ನೇ ಮಾಡಿಕೊಂಡು ಇರಲಿ. ನಾವೂ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಇನ್ನು ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದುದು. ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ. ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ ಎಂದು ಡಿನ್ನರ್ ಪಾರ್ಟಿಯ ಬಗ್ಗೆ ವಿವರಣೆ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











