Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

Facebook
Twitter
Telegram
WhatsApp

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

 

‘ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ.

ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ’ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!