Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಚ್ಚು ನಾಯಿ ರೀತಿಯಲ್ಲಿ ಹೊಡೆದರು.. ಓಡಿ ಬಂದು ಕಾರಲ್ಲಿ ಕೂತೆ : ಎಂ ಪಿ ಕುಮಾರಸ್ವಾಮಿ..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದಾಗಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು. ಆ ಪ್ರತಿಭಟನೆ ವೇಳೆ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಅವರ ಬಟ್ಟೆಯನ್ನೆಲ್ಲ ಹರಿದು ಹಾಕಿದ್ದರು. ಈ ಸಂಬಂಧ ಮಾತನಾಡಿರುವ ಶಾಸಕ ಕುಮಾರಸ್ವಾಮಿ, ಹುಚ್ಚು ನಾಯಿಯ ರೀತಿ ಓಡಿಸಿಕೊಂಡು ಬಂದು ಹೊಡೆದಿದ್ದಾರೆ ಎಂದಿದ್ದಾರೆ.

ಆ ಜಾಗದಲ್ಲಿ ತುಂಬಾ ಜನ ದೊಣ್ಣೆ ಹಿಡಿದುಕೊಂಡು ನಿಂತಿದ್ದರು. ನಂಗೆ ಚಪ್ಪಲಿಯಲ್ಲಿ ಹೊಡೆದರು. ಒಳ್ಳೆ ಕಳ್ಳನಿಗೆ ಹೊಡೆದಂತೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆದಿದ್ದಾರೆ. ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಓಡಿ ಬಂದು ಕಾರಿನಲ್ಲಿ ಕುಳಿತೇ. ಬಳಿಕ ಪೊಲೀಸರ ಜೀಪಿನ ಮೇಲೂ ಕಲ್ಲು ತೂರಾಟ ನಡೆಸಿದರು.

ಕಾಡಾನೆ ದಾಳಿಯಿಂದ ಮಾಡಿದ್ದಲ್ಲ. ಇದು ರಾಜಕೀಯ ದಾಳಿ ಎಂಬುದು ಅರ್ಥವಾಗುತ್ತಿದೆ. ಬಟ್ಟೆ ಹರಿದರೆ ಹರಿಯಲಿ. ಇನ್ನು ನೂರು ಬಟ್ಟೆ ತೆಗೆದುಕೊಳ್ಳಬಹುದು. ಆದ್ರೆ ಈ ಘಟನೆಯಲ್ಲಿ ಕಣ್ಣೋ, ಕೈ ಕಾಲೋ ಹೋಗಿದ್ದರೆ ಏನು ಮಾಡಬೇಕಿತ್ತು. ನನಗೆ ಮಾತ್ರವಲ್ಲ ನನ್ನ ಜೊತೆಗಿದ್ದ ಪೊಲೀಸರ ಮೇಲೂ ದಾಳಿಯಾಗಿದೆ. ರಾಜಕೀಯವಾಗಿ ನಾನು ಚುನಾವಣೆಗೆ ನಿಲ್ಲಬಾರದು ಎಂದು ವ್ಯವಸ್ಥಿತ ಹಲ್ಲೆ ನಡೆಸಿದ್ದಾರೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ರೂಪಿಸಿದ್ದಾರೆ. ನಾನು ಒಂದೇ ಒಂದು ಮಾತನ್ನು ಆಡಿಲ್ಲ. ಬಹಳ ಸಂಚು ರೂಪಿಸಿ ಈ ರೀತಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!