Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರಿಗೆ ಶಕ್ತಿ ಇರಬಹುದು, ನಮಗೆ ಇಲ್ಲ : ಡಿಕೆ ಶಿವಕುಮಾರ್..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಕಲ್ಲು ಬಂಡೆ, ಎಲ್ಲವನ್ನು ಹೊತ್ತಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಸಾಕಷ್ಟು ಕುತಂತ್ರ ನಡೆಯುತ್ತಿದೆ. ನನಗೆ ಇದೆಲ್ಲವು ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಬಹಳ ಹಿರಿಯರು, ಬುದ್ಧಿವಂತರು ಹಾಗೂ ಸಾಹಿತಿಗಳಿದ್ದಾರೆ. ನಮ್ಮ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕುಮಾರಸ್ವಾಮಿ ಅವರ ಟ್ವೀಟ್ ಟೀಕೆಗೆ ನಾವು ಉತ್ತರ ನೀಡಬೇಕಾಗುತ್ತದೆ. ಅವರಿಗೆ ರಾಜಕಾರಣದಲ್ಲಿ ಬಹಳ ಅನಭವವಿದೆ. ಅವರಿಗೆ ಹೋರಾಟದ ಕುಟುಂಬದ ಹಿನ್ನೆಲೆಯಿದೆ.

ಅವರು ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರೂ ಆಗಿದ್ದಾರೆ. ಅವರಿಗೆ ಯಾವ ಸಮಯದಲ್ಲಿ ಏನು ಹೇಳಬೇಕು ಅನ್ನೋದು ಗೊತ್ತಿದೆ. ರಾಜಕೀಯದಲ್ಲಿ ಗೆಲವು, ಸೋಲು ಸಹಜ. ಅದರಿಂದ ಅನುಭವ ಬರುತ್ತದೆ. ಅವರು ಟೀಕೆ ಮಾಡಲಿ. ಆದರೆ ಆಶ್ಚರ್ಯ ಎಂದರೆ, ಚನ್ನಪಟ್ಟಣದಲ್ಲಿ ಫೈರಿಂಗ್ ಆಯ್ತು ಎಂದು ಎಸ್.ಎಂ. ಕೃಷ್ಣ ಅವರ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಿದರು. ಗಂಗಾಧರಮೂರ್ತಿ ಕೊಲೆ ಪ್ರಕರಣ ಸಂಬಂಧ ಪಾದಯಾತ್ರೆ ಮಾಡಿದರು. ತಲೆ ಮೇಲೆ ಸೀಮೆ ಎಣ್ಣೆ ಡಬ್ಬ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಪಾದಯಾತ್ರೆ ಮಾಡುತ್ತಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ

error: Content is protected !!