Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾನರ್ ಗಲಾಟೆ ನೆಪದಲ್ಲಿ ನನ್ನನ್ನು ಕೊಲೆಗೆ ಸ್ಕೆಚ್ : ಜನಾರ್ಧನ ರೆಡ್ಡಿ

---Advertisement---

 

ಬಳ್ಳಾರಿ: ನಿನ್ನೆ ರಾತ್ರಿ ಬ್ಯಾನರ್ ವಿಚಾರಕ್ಕೆ ನಗರದ ಅವಂಬಾವಿ ಏರಿಯಾದಲ್ಲಿರುವ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ನಾಳೆ (ಜ.3) ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆ ಬ್ಯಾನರ್ ಅಳವಡಿಕೆ ಮಾಡಲಾಗುತ್ತಿತ್ತು. ಒಂದು ಗುಂಪು ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದರು. ಅಲ್ಲಿಗೆ ಧಾವಿಸಿದ ಮತ್ತೊಂದು ಗುಂಪು ಏಕಾಏಕಿ ಗಲಾಟೆ ಮಾಡಿದೆ. ಈ ವೇಳೆ ಗಾಳಿಯಲ್ಲಿ ಗುಂಡಿನ ದಾಳಿಯನ್ನು ನಡೆಸಲಾಗಿದೆ. ಈ ಬಗ್ಗೆ ಜನಾರ್ದನ ರೆಡ್ಡಿ ಅವರು ನನ್ನ ಹತ್ಯೆಗೆ ಸ್ಕೆಚ್ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜನಾರ್ದನ ರೆಡ್ಡಿ ಅವರು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಆಪ್ತ ಸತೀಶ್ ರೆಡ್ಡಿ ಹಾಗೂ ಭರತ್ ರೆಡ್ಡಿ ತಂದೆ ನಾರಾ ಸೂರ್ಯನಾರಾಯಣ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.

ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ನಿವಾಸದ ಮುಂದೆ ಗನ್ ಮ್ಯಾನ್‌ಗಳಿಂದ ಗುಂಡಿನ ದಾಳಿಯಾಗಿದೆ. ನಾನು ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಗುಂಡಿನ‌ ದಾಳಿ ಆರಂಭಿಸಿದ್ದಾರೆ. ಗನ್ ಮ್ಯಾನ್‌ಗಳು ನಾಲ್ಕಾರು ರೌಂಡ್ ಪೈರ್ ಮಾಡಿದ್ದಾರೆ. ಪುತ್ಥಳಿ ಪ್ರತಿಷ್ಟಾಪನೆ ಹೆಸರಲ್ಲಿಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗೆಡುಕರನ್ನ ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕಲ್ಲು ತೂರಾಟದ ಬೆನ್ನಲ್ಲೇ ಶ್ರೀರಾಮು ಕೂಡ ರೆಡ್ಡಿ ಅವರ ಮನೆಗೆ ಆಗಮಿಸಿದ್ದಾರೆ. ಹಾಗೇ ರೆಡ್ಡಿ ಬೆಂಬಲಿಗರು ಆಗಮಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...