Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಮೀನಿನಲ್ಲಿ ವಿದ್ಯುತ್ ತಂತಿಗಳನ್ನು ಬಿಡದ ಕಳ್ಳರು : ಧಾರವಾಡ ರೈತರಿಗೆ ಆತಂಕ

---Advertisement---

 

ಧಾರವಾಡ: ಮಳೆ ಇಲ್ಲದೆ ಬೆಳೆ ನೆಲಕಚ್ಚಿದೆ. ಭೂಮಿಯಲ್ಲಿರುವ ಸಸಿ ಸೀದು ಹೋಗುತ್ತಿದೆ. ಇದರ ಜೊತೆಗೆ ಧಾರವಾಡದ ರೈತರಿಗೆ ಕಳ್ಳರ ಕಾಟ ಬೇರೆ ಜಾಸ್ತಿಯಾಗಿದೆ. ರೈತರ ಜಮೀನುಗಳಲ್ಲಿರುವ ವಿದ್ಯುತ್ ತಂತಿಯನ್ನು ಬಿಡುತ್ತಿಲ್ಲ.

 

ಈ ಮೊದಲು ರೈತರ ಪಂಪ್ ಸೆಟ್ ಹಾಗೂ ಜಮೀನಿನಲ್ಲಿದ್ದ ಹಲವು ಪರಿಕರಗಳನ್ನು ಕದಿಯುತ್ತಿದ್ದರು. ಈಗ ರೈತರ ಜಮೀನುಗಳಿಗೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಕದಿಯುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸರ ಮೊರೆ ಹೋಗಿದ್ದರು, ಕಳ್ಳರು ಮಾತ್ರ ಸಿಕ್ಕಿಲ್ಲ.

 

ಇನ್ನು ನವಲಗುಂದ ತಾಲೂಕಿನ ತಲೆ ಮೊರಬ ಗ್ರಾಮದಲ್ಲಿ ರೈತರ ಜಮೀನುಗಳಿರುವ ವಿದ್ಯುತ್ ಕಂಬದಿಂದಾನೇ ತಂತಿಗಳನ್ನು ಕಳ್ಳತನ ಮಾಡುತ್ತಿದ್ದಾರೆ. 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳನ್ನು ಹೆಸ್ಕಾಂ ರೈತರ ಜಮೀನುಗಳಿಗೆ ಅಳವಡಿಕೆ ಮಾಡಿದ್ದರು. 14 ಕಂಬಗಳಿಗೆ ನಾಲ್ಕು ವಿದ್ಯುತ್ ತಂತಿ ಅಳವಡಿಸಿದ್ದರು. ಆದರೆ ಮಾರನೇ ದಿನ ಬಂದು ನೋಡಿದರೆ ಆ ಕಂಬಗಳಲ್ಲಿ ವಿದ್ಯುತ್ ಅಳವಡಿಕೆಯ ತಂತಿಗಳೇ ಇಲ್ಲ. ಟ್ರಾನ್ಸ್ ಫಾರ್ಮರ್ ನಿಂದ ವಿದ್ಯುತ್ ಕಲ್ಪಿಸುವ ಮುನ್ನವೇ ಕದ್ದು ಪರಾರಿಯಾಗಿದ್ದಾರೆ.

ಈ ವಿಚಾರ ತಿಳಿದ ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ, ಇದು ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ‌ ಪಡೆದು ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ. ಬೆಳೆಯನ್ನ ಪ್ರಾಣಿಗಳು ಹಾಳು ಮಾಡುತ್ತವೆ ಎಂಬ ಭಯಕ್ಕೆ ಹೊಲದಲ್ಲಿ ಗೊಂಬೆಗಳನ್ನ ನೆಡುತ್ತಾರೆ. ಆದರೆ ಹೀಗೆ ಮನುಷ್ಯರೇ ಬೆಳೆಗೆ ನೀರಿಲ್ಲದಂತೆ ಮಾಡುವ ಕೆಲಸಕ್ಕೆ ಕೈ ಹಾಕಿದರೆ, ರೈತ ತಾನೇ ಇನ್ನೆಷ್ಟು ಕಾವಲಿಗೆ ಇರುತ್ತಾನೆ. ಶಾಸಕರ ಸೂಕ್ತ ಕ್ರಮದಿಂದಾದ್ರೂ ಈ ಕಳ್ಳತನ ತಪ್ಪಬಹುದಾ ಎಂಬ ನಿರೀಕ್ಷಯಿಂದಾನೇ ರೈತ ಮುಂದೆ ನಡೆದಿದ್ದಾನೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment