Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ವಾಹನದ ಮೇಲೆ ಕಲ್ಲೆಸೆದು ಪರಾರಿಯಾಗಿದ್ದ ಕಳ್ಳರು : ಓರ್ವನನ್ನು ಬಂಧಿಸಿದ ನಾಯಕನಹಟ್ಟಿ ಪೊಲೀಸರು

---Advertisement---

 

ಸುದ್ದಿಒನ್, ಚಳ್ಳಕೆರೆ, ಜುಲೈ.29 : ತಾಲ್ಲೂಕಿನ ಕುದಾಪುರ ಬಳಿ ಇತ್ತೀಚೆಗೆ ಪೊಲೀಸ್ ಜೀಪ್ ಮೇಲೆ ಆಂಧ್ರದ ಅನಂತಪುರ ಮೂಲದ ಕಳ್ಳರು ಕಲ್ಲೆಸೆದು ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ವೆಂಕಟರಮಣ ನನ್ನು ಬಂಧಿಸಿ ಆತನಿಂದ ಟಾಟಾ ಯೋಧ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

 

ಇದೇ ಜುಲೈ 21ರಂದು ಕುದಾಪುರ ಬಳಿ ತಪಾಸಣೆಗೆಂದು ವಾಹನವನ್ನು ಪೊಲೀಸರು ತಡೆದರೂ ನಿಲ್ಲಿಸದೆ ಪೊಲೀಸ್ ಜೀಪ್ ಮೇಲೆ ಕಲ್ಲೆಸೆದು ಕಳ್ಳರು ಎಸ್ಕೇಪ್ ಆಗಿದ್ದರು. ಆ ವೇಳೆ ನಾಯಕನಹಟ್ಟಿ ಪಿಎಸ್ ಐ ಶಿವಕುಮಾರ್ 2 ಗುಂಡು ಗಾಳಿಯಲ್ಲಿ ಮತ್ತು 3 ಗುಂಡು ವಾಹನದತ್ತ ಹಾರಿಸಿದ್ದರು. ಆದರೆ ಚಾಲಾಕಿ ಕಳ್ಳರು ನೆರೆಯ ಆಂಧ್ರಪ್ರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಾಯಕನಹಟ್ಟಿ ಠಾಣೆಯ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಆರೋಪಿ ವೆಂಕಟರಮಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದ ಏಳು ಜನ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment