ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಮುಖೇಶ್ ಅಂಬಾನಿ, ಭಾರತದ ದಿಗ್ಗಜ ಉದ್ಯಮಿ, ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಸರಣಿ ಬೆದರಿಕೆಗಳು ಬರುತ್ತಿವೆ. ಸೋಮವಾರ ಬೆಳಗ್ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ಈ ಬೆದರಿಕೆ ಈ ಮೇಲ್
(e – mail) ಮೂಲಕ ಬಂದಿದೆ ಎಂದು ತಿಳಿದುಬಂದಿದೆ. ಈಗ ಆಗಂತುಕ ನೇರವಾಗಿ 400 ಕೋಟಿಗೆ ಬೇಡಿಕೆ ಇಟ್ಟಿದ್ದಾನೆ. ಅಕ್ಟೋಬರ್ 27 ಮತ್ತು 28 ರಂದು ಬೆದರಿಕೆಗಳು ಬಂದ ವ್ಯಕ್ತಿಯಿಂದಲೇ ಮೇಲ್ ಬಂದಿದೆ. ನಿಮ್ಮ ಭದ್ರತೆ ಎಷ್ಟೇ ಬಲವಾಗಿದ್ದರೂ ನಮಗೆ ಅದು ಬೇಕಾಗಿಲ್ಲ. ನಮ್ಮ ಸ್ನಿಪರ್ಗಳಲ್ಲಿ ಒಬ್ಬರು ನಿಮ್ಮನ್ನು ಕೊಲ್ಲುತ್ತಾರೆ. ಈ ಬಾರಿ ನಮಗೆ ರೂ. 400 ಕೋಟಿ ಅಗತ್ಯವಿದೆ. ಪೊಲೀಸರಿಗೆ ನನ್ನ ಜಾಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಬಂಧಿಸಲೂ ಸಾಧ್ಯವಿಲ್ಲ’ ಎಂದು ಮೇಲ್ನಲ್ಲಿದೆ.
ಆಗಂತುಕರ ಸರಣಿ ಬೆದರಿಕೆಗಳ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸದ ಮುಂದೆ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಕ್ಟೋಬರ್ 27 ರಂದು ಅಂಬಾನಿಗೆ ಮೊದಲ ಬೆದರಿಕೆ ಬಂದಿತ್ತು. ಆಗ ರೂ. 20 ಕೋಟಿ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಮ್ಮಲ್ಲಿ ಅತ್ಯುತ್ತಮ ಶೂಟರ್ಗಳು ಇದ್ದಾರೆ ಎಂದು ಈ ಮೇಲ್ ನಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈನ ಗಾಂದೇವಿ ಪೊಲೀಸ್ ಠಾಣೆಯಲ್ಲಿ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಮೇರೆಗೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387, 506(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಇದಾದ ನಂತರ ಅಕ್ಟೋಬರ್ 28 ರಂದು ಅಂಬಾನಿಗೆ ಎರಡನೇ ಬಾರಿಗೆ ಬೆದರಿಕೆ ಮೇಲ್ ಬಂದಿತ್ತು. ಈ ಬಾರಿ ಮೊದಲಿನ ಬೆದರಿಕೆಯನ್ನು ಕಡೆಗಣಿಸಲಾಗಿದ್ದು, ಸೂಕ್ತ ಸ್ಪಂದನೆ ದೊರೆಯದ ಕಾರಣ ಎಚ್ಚರಿಕೆ ನೀಡಿ ಶಂಕಿತ ಆರೋಪಿ ರೂ. 200 ಕೋಟಿಗೆ ಬೇಡಿಕೆ ಇಟ್ಟಿದ್ದ. ಇದೀಗ ಮೂರನೇ ಬಾರಿಗೆ ಬೆದರಿಕೆ ಬಂದಿದೆ.
ಆದರೆ ಅಂಬಾನಿಗೆ ಬೆದರಿಕೆಗಳು ಬಂದಿರುವುದು ಇದೇ ಮೊದಲಲ್ಲ. 2022 ರಲ್ಲಿ, ಅಪರಿಚಿತ ವ್ಯಕ್ತಿಯೊಬ್ಬರು ಸರ್ ಹೆಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಕರೆ ಮಾಡಿ ಅದನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಅದೇ ವರ್ಷದ ಆಗಸ್ಟ್ನಲ್ಲಿ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಆಭರಣ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದರು.
ಈ ಹಿಂದೆ ಫೆಬ್ರವರಿ 2021 ರಲ್ಲಿ, ಅಂಬಾನಿ ಅವರ ಆಂಟಿಲಿಯಾ ನಿವಾಸದ ಮುಂದೆ ಸ್ಫೋಟಕಗಳನ್ನು ತುಂಬಿದ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (SUV) ಪತ್ತೆಯಾಗಿತ್ತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್