Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಸರ್ಕಾರ ಕೊರೊನಾ ಕಾಲದಲ್ಲೂ ಲೂಟಿ ಮಾಡಿದೆ: ಸಿದ್ದರಾಮಯ್ಯ ಆರೋಪ

Facebook
Twitter
Telegram
WhatsApp

ಹಾನಗಲ್: ನಮ್ಮ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಭಾಗ್ಯ, ಸಾಲ ಮನ್ನಾ, ಶಾದಿ ಭಾಗ್ಯ, ಪಶು ಭಾಗ್ಯ, ಇಂದಿರಾ ಕ್ಯಾಂಟೀನ್, ಅನುಗ್ರಹ ಮುಂತಾದ ಯೋಜನೆಗಳನ್ನು ಕೈಬಿಟ್ಟಿದ್ದಾರೆ ಎಂದು ಸರ್ಕಾರದ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಈ ವೇಳೆ ಮಾತನಾಡಿದ ಅವರು, ಅವರನ್ನ ಈ ಬಗ್ಗೆ ಕೇಳಿದ್ರೆ ಕೊರನಾಗೆ ಖರ್ಚು ಮಾಡಿದೀವಿ , ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಈ ಸರ್ಕಾರ ಕೊರೊನಾ ಕಾಲದಲ್ಲೂ ಲೂಟಿ ಮಾಡಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದರು.

ನಾನು ಮುಖ್ಯಮಂತ್ರಿ ಆಗುವಾಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನ ಕೇವಲ 400 ಕೋಟಿ ರೂಪಾಯಿ ಇತ್ತು, ನನ್ನ ಕಡೇ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡಿದ ಅನುದಾನ 3,100 ಕೋಟಿ. ಬಡವರಿಗೆ ಅಕ್ಕಿ ಕೊಟ್ಟು ಜನರನ್ನು ಸೋಮಾರಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳ್ತಾರೆ. ಹಸಿವಿನ ಸಂಕಟ ಗೊತ್ತಿಲ್ಲದವರು ಮಾತ್ರ ಇಂಥಾ ಹೇಳಿಕೆ ಕೊಡಲು ಸಾಧ್ಯ.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ವರ್ಷ ತುಂಬಿದೆ. ಸುಳ್ಳು ಭರವಸೆ ನೀಡೋದು ಬಿಟ್ಟು ಜನರಿಗೆ ಬೇರೇನೂ ಮಾಡಿಲ್ಲ. ಅಚ್ಚೇ ದಿನ್ ಬರುತ್ತೆ ಅಂತ ಹೇಳಿದ್ರು, ಬಂತಾ? ಸಬ್ ಕ ಸಾಥ್, ಸಬ್ ಕ ವಿಕಾಸ್ ಅಂತ ಬಾಯಲ್ಲಿ ಹೇಳ್ತಾರೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡ್ತಾರೆ. ಎಲ್ಲಾ ಧರ್ಮದ, ಜಾತಿಯ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಏಕೈಕ ಪಕ್ಷ ಕಾಂಗ್ರೆಸ್. ಕಾರಣ ನಾವು ಸಂವಿಧಾನದ ಹಾದಿಯಲ್ಲಿ ನಡೆಯುವವರು. ಸಂಪತ್ತಿನ ಸಮಾನ ಹಂಚಿಕೆ, ಸರ್ವರಿಗೂ ಸಮಾನ ಅವಕಾಶ, ಪರಸ್ಪರ ಪ್ರೀತಿ ವಿಶ್ವಾಸ ದಿಂದ ಬದುಕಬೇಕು ಎಂದು ನಂಬಿದವರು ನಾವು. ಮಹಾತ್ಮ ಗಾಂಧಿಯವರ ಚಿಂತನೆಗಳು ನಮಗೆ ಪ್ರೇರಣೆ.

ದೇಶದ ಸುಮಾರು 14% ಜನಸಂಖ್ಯೆ ಇರುವ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಒಬ್ಬನೇ ಒಬ್ಬ ಶಾಸಕನಾಗಲೀ, ಸಂಸದನಾಗಲೀ, ಮಂತ್ರಿಯಾಗಲೀ ಬಿಜೆಪಿ ಪಕ್ಷದಲ್ಲಿ ಇಲ್ಲ. ಯಾಕೆ ಅವರು ದೇಶದ ನಾಗರಿಕರಲ್ಲವೇ? ಯಡಿಯೂರಪ್ಪ ಅವರ ಸರ್ಕಾರ ಹಾವೇರಿಯಲ್ಲಿ ರೈತರ ಮೇಲೆ ಗುಂಡು ಹಾರಿಸಿ ಕೊಲ್ಲಿಸಿತ್ತು. ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹತ್ತಿಸಿ, ನಾಲ್ವರು ರೈತರನ್ನು ಹತ್ಯೆ ಮಾಡಿದ್ದಾನೆ. ಇವರನ್ನು ಕೊಲೆಗಡುಕರು, ಗೂಂಡಾಗಳ ಸರ್ಕಾರ ಅನ್ನದೆ ಇನ್ನೇನು ಹೇಳಬೇಕು ಎಂದು ಪ್ರಶ್ನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

error: Content is protected !!