ಮುಂದಿನ ಚುನಾವಣೆಯೇ ನನ್ನ ಕೊನೆ ಎಲೆಕ್ಷನ್ : ಹಿಂಗ್ಯಾಕಂದ್ರು ಸಿದ್ದರಾಮಯ್ಯ..?

1 Min Read

 

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ಕೂಡ ನಡೆಸುತ್ತಿವೆ. ಈ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಈ ಬಾರಿಯ ಚುನಾವಣೆಯೇ ಕಡೆ ಎನ್ನುತ್ತಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯ ನನ್ನ ಕಡೆಯ ಚುನಾವಣೆ. ಆ ಬಳಿಕ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಅಂತ ಕರೆಯುತ್ತಿದ್ದಾರೆ. ಆದ್ರೆ ನಾನು ಈ ಬಗ್ಗೆ ಇನ್ನು ಏನನ್ನು ನಿರ್ಧಾರ ಮಾಡಿಲ್ಲ. ಈಗಲೇ ಈ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ.

ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇದೆ. ವರುಣಾ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲೂ ಒತ್ತಡವಿದೆ. ಆದ್ರೆ ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಲಿದೆ. ನನಗೆ ರಾಜಕೀಯ ಜನ್ಮ ಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೇ ನನ್ನನ್ನ ಸೋಲಿಸಿದ್ರು. ಹೀಗೆಂದು ನಾನು ಅವರನ್ನ ದ್ವೇಷಿಸಲ್ಲ. ಆದ್ರೆ 2023 ಚುನಾವಣೆ ಬಳಿಕ ರಾಜಕೀಯ ನಿವೃತ್ತಿ ಪಡೆದು, ಸಕ್ರೀಯ ರಾಜಕಾರಣದಲ್ಲಿ ಮಾತ್ರ ಇರುತ್ತೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *