ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮಾರ್ಟಿನ್ ಸಿನಿಮಾದ ಶೂಟಿಂಗ್ ಗಾಗಿ ಶ್ರೀನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ದೆಹಲಿಯಿಂದ ಶ್ರೀನಗರಕ್ಕೆ ವಿಮಾನದಲ್ಲಿ ತೆರಳುತ್ತಿದ್ದರು. ಹವಮಾನ ವೈಪರೀತ್ಯದಿಂದಾಗಿ ವಿಮಾನ ದುರಂತ ನಡೆಯಬೇಕಿತ್ತು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
ವಿಮಾನವನ್ನು ಲ್ಯಾಂಡ್ ಮಾಡಲು ಆಗದೆ ಪೈಲೆಟ್ ಪರದಾಡಿದ್ದಾರೆ. ಈ ವಿಮಾನದಲ್ಲಿ ಹದಿನೈದು ಜನ ಪ್ರಯಾಣ ಮಾಡುತ್ತಿದ್ದರು. ಹೇಗೋ ಪೈಲೆಟ್ ದೇವರಂತೆ ನಿಧಾನವಾಗಿ ಲ್ಯಾಂಡ್ ಮಾಡಿದ್ದಾನೆ. ಎಲ್ಲರೂ ಸಮಾಧಾನವಾಗಿ ನಿಟ್ಟುಸಿರು ಬಿಟ್ಟಿದ್ದಾರೆ.
ಈ ಘಟನೆ ಬಗ್ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಘಟನೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದಾರೆ. ನನ್ನ ಜೀವನದಲ್ಲಿಯೇ ವಿಮಾನದಲ್ಲಿ ಇದು ಮೊದಲ ಬಾರಿಗೆ ಆದಂತ ಅನುಭವ. ಅತ್ಯಂತ ಕೆಟ್ಟ ಅನುಭವ. ನಾವೀಗ ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್ ಜೈ ಆಂಜನೇಯ. ದೇವರ ಆಶೀರ್ವಾದ, ಅಭಿಮಾನಿಗಳ ಹಾರೈಕೆ, ಜೀವ ಹಾನಿಯಿಂದ ತಪ್ಪಿಸಿಕೊಂಡಿದೆ. ಮೊದಲ ಬಾರಿಗೆ ಸಾವನ್ನು ಎದುರಿಸಿ, ಜೀವ ಸಿಕ್ಕಂತಾಗಿದೆ. ನನ್ನ ತಂದೆ ತಾಯಿ, ನನ್ನ ವಿಐಪಿಗಳು ಹಾಗೂ ನನ್ನ ದೇವರು ಚಿರು ಅಣ್ಣನ ಸಂಪೂರ್ಣ ಆಶೀರ್ವಾದದ ಫಲ ಇದು.
ವಿಮಾನದಲ್ಲಿದ್ದ ಪ್ರತಿ ಪ್ರಯಾಣಿಕರು ತಮ್ಮ ಪ್ರಾಣಕ್ಕಾಗಿ ತಮ್ಮ ದೇವರಿಗೆ ಜೋರಾಗಿ ಪ್ರಾರ್ಥಸುವುದನ್ನು, ಕೇಳುವುದು ನಿಜಕ್ಕೂ ಉಸಿರು ತೆಗೆದುಕೊಳ್ಳುವ ಅನುಭವ. ಸುರಕ್ಷಿತವಾಗಿ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರು ಸಂತೋಷದಿಂದ ಕಣ್ಣೀರು ಹಾಕಿದರು. ಪ್ರತಿಯೊಬ್ಬರು ತಮ್ಮ ಪ್ರೀತಿ ಪಾತ್ರರಿಗೆ ಕರೆ ಮಾಡಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್