Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಸಾಡಿದ ಸಿಮ್ ಕಾರ್ಡ್‌ಗಳಿಂದ 27 ಲಕ್ಷ ರೂ. ಬೆಲೆಬಾಳುವ ಚಿನ್ನ ತೆಗೆದ ಈತ!

---Advertisement---

ನೆಟ್‌ವರ್ಕ್ ಬದಲಾಯಿಸಿದಾಗ ನಾವು ಸಿಮ್ ಕಾರ್ಡ್‌ಗಳನ್ನು ಬಿಸಾಡುತ್ತೇವೆ. ಆದರೆ, ಇಲ್ಲೊಬ್ಬರು ಅದೇ ಹಳೆಯ ಸಿಮ್ ಕಾರ್ಡ್‌ ಮತ್ತು ಎಲೆಕ್ಟ್ರಾನಿಕ್ ತ್ಯಾಜ್ಯವನ್ನು ಬಳಸಿ  27 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಹೊರತೆಗೆದಿದ್ದಾನೆ.ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಹುಯಿಝೌ ಮೂಲದ ಕ್ವಿಯಾವೊ ಎಂಬುವವರು ಈ ಪ್ರಯೋಗ ಮಾಡಲಾಗಿದೆ.

ನಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಬಳಸುವ ಸಿಮ್ ಕಾರ್ಡ್‌ಗಳು ಮತ್ತು ಮೆಮೊರಿ ಕಾರ್ಡ್‌ಗಳ ಮೇಲೆ ಹಳದಿ ಬಣ್ಣ ಇರುವುದನ್ನು ನಾವೆಲ್ಲ ಗಮನಿಸಿರಬಹುದು. ಇದು ಕೇವಲ ಬಣ್ಣವಲ್ಲ,  ಚಿನ್ನದ ತೆಳುವಾದ ಲೇಪನವಾಗಿರುತ್ತದೆ. ಚಿನ್ನವು ಅತ್ಯುತ್ತಮ ವಿದ್ಯುತ್ ವಾಹಕವಾಗಿದೆ ಮತ್ತು ಇದು ತುಕ್ಕು ಹಿಡಿಯುವುದಿಲ್ಲ. ಡೇಟಾ ವೇಗವಾಗಿ ವರ್ಗಾವಣೆಯಾಗಲು ಮತ್ತು ಕಾರ್ಡ್ ದೀರ್ಘಕಾಲ ಬಾಳಿಕೆ ಬರಲು ಈ ಚಿನ್ನದ ಲೇಪನವನ್ನು ಬಳಸಲಾಗುತ್ತದೆ. ಸಾಮಾನ್ಯವಾಗಿ ಒಂದು ಸಿಮ್ ಕಾರ್ಡ್‌ನಲ್ಲಿ 0.001 ಗ್ರಾಂ ಗಿಂತಲೂ ಕಡಿಮೆ ಪ್ರಮಾಣದ ಚಿನ್ನವಿರುತ್ತದೆ.

ಲೋಹ ಸಂಸ್ಕರಣಾ ತಜ್ಞರಾಗಿರುವ ಕ್ವಿಯಾವೊ, ಸುಮಾರು 2 ಟನ್ ತೂಕದ ಹಳೆಯ ಸಿಮ್ ಕಾರ್ಡ್‌ಗಳು ಮತ್ತು ಮೊಬೈಲ್ ಚಿಪ್‌ಗಳಂತಹ ಎಲೆಕ್ಟ್ರಾನಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದರು. ಇವುಗಳನ್ನ ರಾಸಾಯನಿಕ ಪ್ರಕ್ರಿಯೆಗೆ ಒಳಪಡಿಸಿ ಅದರಿಂದ 191 ಗ್ರಾಂ ಶುದ್ಧ ಚಿನ್ನವನ್ನು ಹೊರತೆಗೆದಿದ್ದಾರೆ.  ಮಾರುಕಟ್ಟೆ ಮೌಲ್ಯದ ಪ್ರಕಾರ ಇದರ ಬೆಲೆ ಸುಮಾರು 27 ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಓದಿ ಮನೆಯಲ್ಲೇ ಚಿನ್ನ ತೆಗೆಯುವ ಸಾಹಸಕ್ಕೆ ಕೈಹಾಕಬೇಡಿ ಎಂದು ಕ್ವಿಯಾವೊ ಎಚ್ಚರಿಕೆ ನೀಡಿದ್ದಾರೆ. ಚಿನ್ನವನ್ನು ಬೇರ್ಪಡಿಸಲು ಹೈಡ್ರೋಕ್ಲೋರಿಕ್ ಆಮ್ಲದಂತಹ ಪ್ರಬಲ ಆಮ್ಲಗಳನ್ನು ಬಳಸಲಾಗುತ್ತದೆ. ಈ ರಾಸಾಯನಿಕ ಕ್ರಿಯೆಯ ಸಮಯದಲ್ಲಿ ಹೊರಬರುವ ಅನಿಲ ಅತ್ಯಂತ ವಿಷಕಾರಿ ಮತ್ತು ಜೀವಹಾನಿಕಾರಕ. ವೃತ್ತಿಪರ ತರಬೇತಿ ಪಡೆದವರಿಗೆ ಮಾತ್ರ ಸಾಧ್ಯವಿರುವ ಕೆಲಸ ಇದಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...