Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಂಚಣಿದಾರರಿಗಾಗಿ ಈ ಸುದ್ದಿ : ಜೀವ ಪ್ರಮಾಣ ಪತ್ರ ಸಲ್ಲಿಸಲು ಎಷ್ಟು ದಿನ ಬಾಕಿ..?

---Advertisement---

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗ ಮಾಡಿ ನಿವೃತ್ತಿ ಹೊಂದಿರುವವರಿಗೆ ಪಿಂಚಣಿ ಬರಲಿದೆ. ಆ ಪಿಂಚಣಿ ಪಡೆಯಲು ಜೀವ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಇದೀಗ ಪಿಂಚಣಿದಾರರು ಪಿಂಚಣಿ ಪಡೆಯಲು ಜೀವ ಪ್ರಮಾಣ ಪತ್ರ ಸಲ್ಲಿಸಲು ಇನ್ನು ಮೂರು ದಿನಗಳ ಕಾಲ ಅವಕಾಶ ನೀಡಲಾಗಿದೆ. ಇನ್ನು ಮೂರು ದಿನಗಳಲ್ಲಿ ಜೀವ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿದೆ.

ಪಿಂಚಣಿಯ ಫಲಾನುಭವಿಗಳು ಪ್ರತಿ ವರ್ಷ ಕೂಡ ಜೀವಂತ ಇರುವ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಸಲ್ಲಿಸದೇ ಹೋದಲ್ಲಿ ಬರುವ ಪಿಂಚಣಿ ನಿಂತು ಹೋಗುತ್ತದೆ. ಜೀವ ಪ್ರಮಾಣ ಪತ್ರವನ್ನು ಹತ್ತಿರದ ಅಂಚೆ ಕಚೇರಿ ಅಥವಾ ಬ್ಯಾಂಕ್ ಗೆ ಸಲ್ಲಿಸಬೇಕಾಗುತ್ತದೆ. ಪಿಂಚಣಿ ತಪ್ಪದೆ ಬರುವುದಕ್ಕೆ ಈ ಪ್ರಮಾಣ ಪತ್ರ ಅತ್ಯಗತ್ಯವಾಗಿದೆ. ಸಮಯ ಮೀರಿದರೆ ಮತ್ತೆ ಅದಕ್ಕೆ ಬೇರೆ ನಿಯಮಗಳು ಅಪ್ಲೈ ಆಗಲಿವೆ.

ನವೆಂಬರ್ 30 ಇದಕ್ಕೆ ಕೊನೆಯ ದಿನ. ಅಷ್ಟರ ಒಳಗೆ ಜೀವ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಸಲ್ಲಿಸದೆ ಹೋದಲ್ಲಿ ಮುಂದಿನ ತಿಂಗಳ ಪಿಂಚಣಿ ನಿಂತು ಹೋಗಲಿದೆ. ಪ್ರಮಾಣ ಪತ್ರ ನೀಡಿ ಮತ್ತೆ ಸಕ್ರೀಯಗೊಳಿಸಿದ ಬಳಿಕ ಪಿಂಚಣಿ ಬರಲಿದೆ. ಪಿಂಚಣಿ ಪಡೆಯುತ್ತಿರುವವರು ಮೃತರಾದರೂ ಸಹ ಅವರ ಖಾತೆಗೆ ಹಣ ಜಮೆಯಾಗುತ್ತಿತ್ತು. ಹೀಗಾಗಿ ಅದನ್ನು ತಪ್ಪಿಸಲು ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಫಲಾನುಭವಿಗಳು ಪ್ರತಿ ವರ್ಷವೂ ತಾವೂ ಬದುಕಿರುವ ಪ್ರಮಾಣ ಪತ್ರವನ್ನು ನೀಡಿ, ಪಿಂಚಣಿ ಪಡೆಯಬಹುದಾಗಿದೆ. ಪಿಂಚಣಿ ಹಣ ಪಡೆಯುವ ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ಸಲ್ಲಿಸಬೇಕು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment