ಈ ಬಾರಿ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಸಿಗಬೇಕು : ಬಿಎಸ್ ಯಡಿಯೂರಪ್ಪ

suddionenews
1 Min Read

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ಚರಪ್ಪ ಅವರು ಗುತ್ತಿಗೆದಾರನ ಆತ್ಮಹತ್ಯೆ ಕೇಸ್ ನಿಂದಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆ ಕೇಸ್ ನಿಂದ ಖುಲಾಸೆಯಾದ ಬಳಿಕ ಮತ್ತೆ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಇದೀಗ ಈ ಬಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿದ್ದು, ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯ ಎಂದಿದ್ದಾರೆ.

ಈಶ್ವರಪ್ಪ ಅವರನ್ನು ನಾನು ರಾಜ್ಯ ಸಚಿವ ಸಂಪುಟದಲ್ಲಿ ನೋಡಬೇಕು. ಈಶ್ವರಪ್ಪ ಅವರಿಗೆ ಸಚಿವ ಸಂಪುಟ ನೀಡುವ ಬಗ್ಗೆ ಕೇಂದ್ರ ನಾಯಕರು ಮನವಿ ಮಾಡಲಿದ್ದಾರೆ ಎಂದಿದ್ದಾರೆ. ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂಬುದು ಯಡಿಯೂರಪ್ಪ ಅವರ ಮನವಿಯಾಗಿದೆ.

ಇನ್ನು ಇದೇ ವೇಳೆ ಸ್ಯಾಂಟ್ರೋ ರವಿ ಬಿಜೆಪಿ ನಾಯಕರ ಜೊತೆಗೆ ಇರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಕ್ರಮ ಕೈಗೊಳ್ಳುವುದಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಗೆ ಸೂಚನೆ ನೀಡಿದ್ದಾರೆ. ತನಿಖೆಯ ನಂತರ ಸತ್ಯ ಎಲ್ಲರಿಗೂ ಗೊತ್ತಾಗಲಿದೆ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *