Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಈ ಬಾರಿಯ ಹಿಂದೂ ಮಹಾಗಣಪತಿಯ ಭಾಗವಾಧ್ವಜವನ್ನು ಪಡೆದವರು ಯಾರು ಮತ್ತು ಎಷ್ಟಕ್ಕೆ ? ಸಂಪೂರ್ಣ ಮಾಹಿತಿ !

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.02) : ಹಿಂದೂ ಮಹಾಗಣಪತಿಯ ಪೆಂಡಾಲ್‍ನಲ್ಲಿ ಶನಿವಾರ ನಡೆದ ‘ಭಾಗವಾಧ್ವಜ’ ಹರಾಜು ಈ ಭಾರಿ ತೀವ್ರ ಕೂತುಹಲ ಕೆರಳಿಸಿತು.

ಸಂಪ್ರದಾಯದಂತೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ 21 ದಿನ ಪೂಜೆ ಸಲ್ಲಿಸಿ ವಿಸರ್ಜನೆ ನಡೆಸುವ ಮುನ್ನ ಭಾಗವಾಧ್ವಜ, ರಾಮಮಂದಿರದ ಪ್ರತಕೃತಿ ಹಾಗೂ ಹೂವಿನ ಹಾರಗಳನ್ನು ಹರಾಜು ಹಾಕಲಾಗುತ್ತದೆ.

ಈ ವರ್ಷ ‘ಭಾಗವಾಧ್ವಜ’ವನ್ನು ಹರಾಜು ಸ್ಥಳಕ್ಕೆ ಕೊನೆ ಕ್ಷಣದಲ್ಲಿ ಆಗಮಿಸಿದ ಉದ್ಯಮಿ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ 2 ಲಕ್ಷದ 1 ಸಾವಿರಕ್ಕೆ ಪಡೆದರು. 50 ಸಾವಿರದಿಂದ ಪ್ರಾರಂಭವಾದ ಹರಾಜು ಕೊನೆಗೆ 2 ಲಕ್ಷಕ್ಕೆ ಬಂದು ನಿಂತಿತು.

ಪ್ರಾರಂಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ವಿಪುಲ್ ಜೈನ್ 1 ಲಕ್ಷದವರೆಗೂ ಕೂಗಿದರು. ಆ ಕ್ಷಣಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಒಮ್ಮೇಲೆ 1.50 ಲಕ್ಷ ಕೂಗಿದರು. ಬಳಿಕ ವಿಪುಲ್ ಜೈನ್ ಹಾಗೂ ಪಪ್ಪಿ ನಡುವೆ ಸ್ಪರ್ಧೆ ಏರ್ಪಟ್ಟು ಮೂರನೇ ಕೂಗಿಗೆ 2 ಲಕ್ಷ ಹೇಳುವ ಮೂಲಕ ‘ಭಾಗವಾಧ್ವಜ’ವನ್ನು ತಮ್ಮದಾಗಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!