Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಹೋಗೋದು ಇವರೇ ನೋಡಿ..!

---Advertisement---

 

ಬಿಗ್ ಬಾಸ್ ಸೀಸನ್‌ 10.. ದಿನಕಳೆದಂತೆ ಗಂಭೀರವಾಗುತ್ತಿದೆ. ಆಟಗಳು ಜೋರಾಗುತ್ತಿವೆ. ಸ್ಪರ್ಧಿಗಳಿಗೆ ನಡುಕ ಉಂಟಾಗುತ್ತಿದೆ. ಕಳೆದ ವಾರದವರೆಗೆ ನಿರೀಕ್ಷಿಸಿದ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದಾರೆ. ಈ ವಾರದಿಂದ ಸ್ಪರ್ಧೆ ಕಠಿಣವಾಗುತ್ತಾ ಸಾಗುತ್ತಿದೆ. ಈ ವಾರ ಮನೆಯಿಂದ ಯಾರು ಹೊರಗೆ ಹೋಗಬಹುದು ಎಂಬ ಕುತೂಹಲ ಎಲ್ಲರಿಗೂ ಇದೆ. ಯಾಕಂದ್ರೆ ಎಲ್ಲರೂ ಚೆನ್ನಾಗಿಯೇ ಆಟವಾಡುತ್ತಿದ್ದಾರೆ. ಹೀಗಾಗಿ ಜಡ್ಜ್ ಮಾಡುವುದು ಬಹಳ ಕಷ್ಟವಾಗುತ್ತಿದೆ.

ಈ ವಾರದ ನಾಮಿನೇಷನ್ ನಲ್ಲಿ ಎಲ್ಲರೂ ಇದ್ದಾರೆ. ಕ್ಯಾಪ್ಟನ್ ಆಗಿರುವ ಕಾರ್ತಿಕ್, ಮೈಕೆಲ್ ಹಾಗೂ ವರ್ತೂರು ಸಂತೋಷ್ ಪಾರಾಗಿದ್ದಾರೆ. ಇನ್ನು ಉಳಿದ ಎಲ್ಲರೂ ನಾಮಿನೇಷನ್ ಸಾಲಿನಲ್ಲಿ ಇದ್ದಾರೆ. ತುಕಾಲಿ ಸಂತೋಷ್, ಸಂಗೀತಾ, ಪ್ರತಾಪ್, ಸಿರಿ, ಸ್ನೇಹಿತ್, ತನಿಶಾ, ವಿನಯ್, ನಮ್ರತಾ, ನೀತೂ ಇವರಲ್ಲಿ ಹೊರಗೆ ಹೋಗುವುದು ಯಾರು ಎಂಬ ಪ್ರಶ್ನೆ ಎದುರಾಗಿದೆ.

ಇವತ್ತು ವಾರದ ಕಥೆ ಕಿಚ್ಚನ ಜೊತೆ ಪಂಚಾಯ್ತಿ ನಡೆಯಲಿದೆ‌. ಈ ಪಂಚಾಯ್ತಿಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಈ ವಾರ ಸಂಗೀತಾ ಹಾಗೂ ಕಾರ್ತೀಕ್ ನಡುವಿನ ಮುನಿಸಿನ ಬಗ್ಗೆ ಕಿಚ್ಚ ಪ್ರಶ್ನೆ ಮಾಡಿದ್ದಾರೆ. ಒಂದೇ ಒಂದು ದಿನದಲ್ಲಿ ಅಭಿಪ್ರಾಯ ಹೇಗೆ ಬದಲಾಯಿತು ಎಂಬುದನ್ನು ಕೇಳಿದ್ದಾರೆ. ವಿಲನ್ ಆಗಿದ್ದ ವಿನಯ್ ಈಗ ಸಂಗೀತಾ ಪಾಲಿಗೆ ಸಾಫ್ಟ್ ಹೀರೋ ಆಗಿದ್ದಾರಂತೆ‌. ಇದನ್ನ ಕಿಚ್ಚನ ಮುಂದೆ ಸಂಗೀತಾ ಅವರೇ ಹೇಳಿದ್ದಾರೆ.

ಈ ವಾರದಲ್ಲಿ ನಾಮಿನೇಟ್ ಆದ ಸದಸ್ಯರಲ್ಲಿ ಸಿರಿ, ಸ್ನೇಹಿತ್ ಹಾಗೂ ನಮ್ರತಾ ನಡುವೆ ನೆಕ್ ಮೂಮೆಂಟ್ ಫೈಟ್ ಇದೆ. ಈ ಫೈಟ್ ನಲ್ಲಿ ಸಿರಿ ಮನೆಯಿಂದ ಹೊರ ಹೋಗುವ ಸಾಧ್ಯತೆ ಇದೆ ಎನ್ನುತ್ತಿವೆ ಮೂಲಗಳು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment