Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿ ಯಾರಿಗೆಲ್ಲಾ ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ : ಇಲ್ಲಿದೆ‌ ಮಾಹಿತಿ

---Advertisement---

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕನ್ನಡ‌ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡದ ಆಯ್ಕೆ ಸಮಿತಿಯಲ್ಲಿ, ಸಾಧಕರ ಹೆಸರನ್ನು ಘೋಷಣೆ ಮಾಡಲಾಗಿದೆ.

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರೇ ಪ್ರಶಸ್ತಿ ವಿಜೇತರ ಹೆಸರನ್ನು ಘೋಷಣೆ ಮಾಡಿದ್ದಾರೆ. 2023ನರೆ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಸಾಧಕರು ಈ ಕೆಳಕಂಡಂತಿದೆ. ಚಲನಚಿತ್ರ, ರಂಗಭೂಮಿ, ನೃತ್ಯ, ಶಿಲ್ಪಕಲೆ, ಯಕ್ಷಗಾನ, ಜಾನಪದ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. 13 ಮಹಿಳೆಯರು ಮತ್ತು 54 ಪುರುಷರು ಮತ್ತು ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಹಿರಿಯ ನಟ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ್, ಡಾ. ನಯನ ಎಸ್ ಮೊರೆ, ನೀಲಾ ಎಂ ಕೊಡ್ಲಿ, ಶಬ್ಬೀರ್ ಅಹ್ಮದ್, ಬಾಳೇಶ್ ಭಜಂತ್ರಿ, ಚಿದಂಬರ ರಾವ್ ಬಂಬೆ – ಶಿವಮೊಗ್ಗ, ಪಿ ಗಂಗಾಧರ ಸ್ವಾಮಿ – ಮೈಸೂರು, ಹೆಚ್ ಬಿ ಸರೋಜಮ್ಮ – ಧಾರವಾಡ, ತಯ್ಯಬಖಾನ್ ಎಂ ಇನಾಮದಾರ – ಬಾಗಲಕೋಟೆ, ಡಾ. ವಿಶ್ವನಾಥ್ ವಂಶಾಕೃತ ಮಠ – ಬಾಗಲಕೋಟೆ, ಪಿ ತಿಪ್ಪೇಸ್ವಾಮಿ – ಚಿತ್ರದುರ್ಗ, ಟಿ.ಶಿವಶಂಕರ್- ದಾವಣಗೆರೆ, ಕಾಳಪ್ಪ ವಿಶ್ವಕರ್ಮ- ರಾಯಚೂರು, ಮಾರ್ಥಾ ಜಾಕಿಮೋವಿಚ್- ಬೆಂಗಳೂರು, ಪಿ.ಗೌರಯ್ಯ- ಮೈಸೂರು, ಅರ್ಗೋಡ್ ಮೋಹನದಾಸ್ ಶೆಣೈ – ಉಡುಪಿ, ಕೆ.ಲೀಲಾವತಿ ಬೈಪಾಡಿತ್ತಾಯ – ದಕ್ಷಿಣ ಕನ್ನಡ, ಕೇಶವಪ್ಪ ಶಿಳ್ಳಿಕ್ಯಾತರ – ಕೊಪ್ಪಳ, ದಳವಾಯಿ ಸಿದ್ದಪ್ಪ – ವಿಜಯನಗರ, ಹುಸೇನಾಬಿ, ಬುಡೆನ್ ಸಾಬ್ ಸಿದ್ದಿ – ಉತ್ತರ ಕನ್ನಡ, ಶಿವಂಗಿ ಶಣ್ಮರಿ – ದಾವಣಗೆರೆ, ಮಹದೇವು – ಮೈಸೂರು, ನರಸಪ್ಪಾ – ಬೀದರ್, ಶಕುಂತಲಾ ದೇವಲಾನಾಯಕ – ಕಲಬುರಗಿ, ಶಂಭು ಬಳಿಗಾರ – ಗದಗ, ವಿಭೂತಿ ಗುಂಡಪ್ಪ – ಕೊಪ್ಪಳ, ಚೌಡಮ್ಮ – ಚಿಕ್ಕಮಗಳೂರು ಇವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...