Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ : ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಕಾರ್ಕಳ, ಆಗಸ್ಟ್. 26 : ಬೆಳೆ ಫಸಲು ಕೊಡುವ ಮೊದಲು ಬರುವ ಕಸವನ್ನು ಕಿತ್ತು ಬಿಸಾಕುವಂತೆ ಭಾರತೀಯ ಸಂಸ್ಕೃತಿ ಹಾಗೂ ಪೂಜ್ಯನೀಯ ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರನ್ನು ಕಿತ್ತು ಎಸೆಯುವ ಕೆಲಸವನ್ನು ಸರಕಾರ ಮಾಡಬೇಕಾಗಿದೆ ಎಂದು ‌ ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಕಾರ್ಕಳದಲ್ಲಿ ಭೋವಿ ಸಮುದಾಯದ ಯುವತಿಯ ಮೇಲೆ ಅನ್ಯಕೋಮಿನ ದುರುಳರು ನಡೆಸಿದ ಅತ್ಯಾಚಾರ ಖಂಡಿಸಿ, ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ, ದ.ಕ ಮತ್ತು ಉಡುಪಿ, ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸಹಯೋಗದಲ್ಲಿ ನಡೆದ ಖಂಡನಾ ಮೆರವಣಿಗೆಯ ಬಳಿಕ ಮಂಜುನಾಥ್‌ ಪೈ ಸಭಾಂಗಣದಲ್ಲಿ ನಡೆದ ಬೃಹತ್‌ ಸಭೆ ಉದ್ದೇಶಿಸಿ ಸ್ವಾಮೀಜಿ ಮಾತನಾಡಿದರು.

ಭಾರತ ಜಗತ್ತಿನ‌‌ ಸಂಸ್ಕಾರ, ಸಂಸ್ಕೃತಿಯ ರಾಯಭಾರಿ. ಇಂತಹ‌ ಪರಂಪರೆ ಇರುವ ದೇಶದಲ್ಲಿ ಅತ್ಯಾಚಾರದ ಘಟನೆಗಳು ನಡೆಯುತ್ತಿರುವುದು ಮುಜುಗರಕ್ಕೀಡು ಮಾಡುತ್ತವೆ. ಮನೆಯಲ್ಲಿ ಸಂಸ್ಕಾರದ ಕೊರತೆಯಿಂದಾಗಿ ಈ ರೀತಿಯ ದುಷ್ಕೃತ್ಯಗಳು ನಡೆಯುತ್ತಿವೆ. ಆಧುನಿಕ ಕಾಲದಲ್ಲಿ ಭಯ ಮಾಯೆಯಾಗಿ‌ ಭಕ್ತಿ ಯಾಂತ್ರಿಕವಾಗಿದೆ. ಹೀಗಾಗಿ ಸಮಾಜ ದಾರಿ ತಪ್ಪುತ್ತಿದೆ. ಇಂತಹ ದುಷ್ಕೃತ್ಯಗಳ ವಿರುದ್ಧ ಸರಕಾರ ಅತ್ಯಂತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಾತಿ, ಧರ್ಮ ನೋಡದೆ ಮಾನವೀಯ ನೆಲೆಯಲ್ಲಿ ಹೆಣ್ಣು ಮಗಳ ಮೇಲಾದ ಅತ್ಯಾಚಾರದ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!