ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ : ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಸುದ್ದಿಒನ್, ಕಾರ್ಕಳ, ಆಗಸ್ಟ್. 26 : ಬೆಳೆ ಫಸಲು ಕೊಡುವ ಮೊದಲು ಬರುವ ಕಸವನ್ನು ಕಿತ್ತು ಬಿಸಾಕುವಂತೆ ಭಾರತೀಯ ಸಂಸ್ಕೃತಿ ಹಾಗೂ ಪೂಜ್ಯನೀಯ ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರನ್ನು ಕಿತ್ತು ಎಸೆಯುವ ಕೆಲಸವನ್ನು ಸರಕಾರ ಮಾಡಬೇಕಾಗಿದೆ ಎಂದು ‌ ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಕಾರ್ಕಳದಲ್ಲಿ ಭೋವಿ ಸಮುದಾಯದ ಯುವತಿಯ ಮೇಲೆ ಅನ್ಯಕೋಮಿನ ದುರುಳರು ನಡೆಸಿದ ಅತ್ಯಾಚಾರ ಖಂಡಿಸಿ, ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ, ದ.ಕ ಮತ್ತು ಉಡುಪಿ, ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸಹಯೋಗದಲ್ಲಿ ನಡೆದ ಖಂಡನಾ ಮೆರವಣಿಗೆಯ ಬಳಿಕ ಮಂಜುನಾಥ್‌ ಪೈ ಸಭಾಂಗಣದಲ್ಲಿ ನಡೆದ ಬೃಹತ್‌ ಸಭೆ ಉದ್ದೇಶಿಸಿ ಸ್ವಾಮೀಜಿ ಮಾತನಾಡಿದರು.

ಭಾರತ ಜಗತ್ತಿನ‌‌ ಸಂಸ್ಕಾರ, ಸಂಸ್ಕೃತಿಯ ರಾಯಭಾರಿ. ಇಂತಹ‌ ಪರಂಪರೆ ಇರುವ ದೇಶದಲ್ಲಿ ಅತ್ಯಾಚಾರದ ಘಟನೆಗಳು ನಡೆಯುತ್ತಿರುವುದು ಮುಜುಗರಕ್ಕೀಡು ಮಾಡುತ್ತವೆ. ಮನೆಯಲ್ಲಿ ಸಂಸ್ಕಾರದ ಕೊರತೆಯಿಂದಾಗಿ ಈ ರೀತಿಯ ದುಷ್ಕೃತ್ಯಗಳು ನಡೆಯುತ್ತಿವೆ. ಆಧುನಿಕ ಕಾಲದಲ್ಲಿ ಭಯ ಮಾಯೆಯಾಗಿ‌ ಭಕ್ತಿ ಯಾಂತ್ರಿಕವಾಗಿದೆ. ಹೀಗಾಗಿ ಸಮಾಜ ದಾರಿ ತಪ್ಪುತ್ತಿದೆ. ಇಂತಹ ದುಷ್ಕೃತ್ಯಗಳ ವಿರುದ್ಧ ಸರಕಾರ ಅತ್ಯಂತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಾತಿ, ಧರ್ಮ ನೋಡದೆ ಮಾನವೀಯ ನೆಲೆಯಲ್ಲಿ ಹೆಣ್ಣು ಮಗಳ ಮೇಲಾದ ಅತ್ಯಾಚಾರದ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು.

suddionenews

Recent Posts

ವಯೋ ನಿವೃತ್ತಿ ನಂತರ ಸಿಬ್ಬಂದಿ ಕರ್ತವ್ಯದಲ್ಲಿ ಮುಂದುವರಿಯುವುದು ಬೇಡ : ರವಿಕುಮಾರ್

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 21 : ತಾಲ್ಲೂಕಿನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೌರವಧನದ ಆಧಾರದ ಮೇಲೆ…

24 minutes ago

ಹಸು, ಎತ್ತು ಇದ್ದ ಮನೆಗೆ ವಾಸ್ತು ಬೇಕಾಗಲ್ಲ : ಗೋ ಸೇವಾ ಪ್ರಮುಖ್ ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

57 minutes ago

ಸೇವಾಲಾಲ್ ಮಹಾರಾಜ್‍ರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಳ್ಳಿ : ಸಂಸದ ಗೋವಿಂದ ಎಂ. ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

1 hour ago

ಸ್ಲಂ ನಿವಾಸಿಗಳಿಗೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನಕ್ಕೆ ಒತ್ತಾಯಿಸಿ ಫೆಬ್ರವರಿ 24 ರಂದು ಹಕ್ಕೊತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಬಜಟ್‍ನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ಮೀಸಲಿಡಲು ಒತ್ತಾಯಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಮೊಬೈಲ್‍ ಗೀಳಿನಿಂದ ಯುವ ಪೀಳಿಗೆ ಹೊರ ಬರಬೇಕು : ಸಿದ್ದಬಸವ ಸ್ವಾಮೀಜಿ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,…

2 hours ago