Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾರಿತ್ರ್ಯಹನನ ಮಾಡಿದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಈಗ ಗೊತ್ತಾಗಿದೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ ರಾಹುಲ್ ಗಾಂಧಿ ಅವರ ಚಾರಿತ್ರ್ಯಹನನ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಜಾತಿ, ಮತ, ಪಂಥ, ಪಕ್ಷಗಳ ಭೇದವನ್ನು ಮರೆತು ನಮ್ಮ ಜೊತೆ ಹೆಜ್ಜೆ ಹಾಕಿ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ಸಿಯನ್ನಾಗಿ ಮಾಡಿದ ಕರ್ನಾಟಕದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು.

ಪುಟ್ಟಬಾಲಕ-ಬಾಲಕಿಯರು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ವೃದ್ಧರು, ಕಾರ್ಮಿಕರು, ರೈತರು, ಕುಶಲಕರ್ಮಿಗಳು, ಸೈನಿಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಭಾಗವಹಿಸಿ ಭಾರತ ಐಕ್ಯತಾ ಯಾತ್ರೆಯ ಸಂದೇಶವನ್ನು ಅರ್ಥಪೂರ್ಣವಾಗಿಸಿದರು.

ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೊ ಯಾತ್ರೆ ಕೈಗೊಡಿರುವ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಆಭಾರಿಯಾಗಿದೆ.

ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಹೇಳುತ್ತಾ ಬಂದಂತೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಆಗಿರದೆ ಸಮಸ್ತ ಜನತೆಯ ಕಾರ್ಯಕ್ರಮವನ್ನಾಗಿ ಮಾಡಿದ ಕರ್ನಾಟಕದ ಜನ ಭವಿಷ್ಯದಲ್ಲಿ ಭರವಸೆ ಹುಟ್ಟಿಸಿದ್ದಾರೆ.

ಸರ್ವಾಧಿಕಾರ, ದುರಾಡಳಿತ, ಕೋಮು ಧ್ರುವೀಕರಣದ ಅಜೆಂಡಾ ವಿರುದ್ಧದ ಜನತೆಯ ಹೋರಾಟಕ್ಕೆ ಭಾರತ ಐಕ್ಯತಾ ಯಾತ್ರೆ ಸ್ಪೂರ್ತಿ ಕೊಟ್ಟಿದೆ. ನಮ್ಮ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಜನಮನವನ್ನು ಇನ್ನಷ್ಟು ಅರ್ಥಮಾಡಿಕೊಳ್ಳಲು ನೆರವಾಗಿದೆ.

ನಮ್ಮ ನಾಯಕರಾದ ರಾಹುಲ್ ಗಾಂಧು ಅವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಿಂದ ನಿರ್ಗಮಿಸಿರಬಹುದು. ಆದರೆ ಯಾತ್ರೆ ಮೂಡಿಸಿದ ಜಾಗೃತಿ, ಹುಟ್ಟಿಸಿದ ಭರವಸೆ ಮತ್ತು ಸಾರಿದ ಐಕ್ಯತೆಯ ಸಂದೇಶದಿಂದ ಪ್ರೇರಣೆ ಪಡೆದ ಪ್ರಜಾಪ್ರಭುತ್ವದ ರಕ್ಷಣೆಯ ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!