Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಪ್ಪು ಮಾಡಿದವರಿಗೆ ಕಾನೂನು ರೀತಿ ಶಿಕ್ಷೆಯಾಗಬೇಕು : ಲಗ್ಗೆರೆ ನಾರಾಯಣಸ್ವಾಮಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್.23 :ಯಾವುದೇ ವ್ಯಕ್ತಿ ತಪ್ಪು ಮಾಡಿದಾಕ್ಷಣ ಆತನನ್ನು ಹಿಂಸಿಸುವುದು, ಹತ್ಯೆ ಮಾಡುವ ಹಂತಕ್ಕೆ ಹೋಗುವುದು ಸರಿಯಲ್ಲ. ತಪ್ಪು ಮಾಡಿದವರಿಗೆ ಕಾನೂನಾತ್ಮಕವಾಗಿ ಶಿಕ್ಷೆ ಕೊಡಿಸಬೇಕು ಎಂದು ಬೆಂಗಳೂರಿನ ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಹೇಳಿದರು.

ದರ್ಶನ್ ಗ್ಯಾಂಗ್‌ನಿಂದ ಹತ್ಯೆಗೀಡಾದ ರೇಣುಕಾಸ್ವಾಮಿ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಆರ್ಥಿಹ ಸಹಾಯ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಪ್ಪು ಮಾಡುವುದು ಮನುಷ್ಯನ ಸಹಜ ಗುಣ. ಹಾಗೆಂದ ಮಾತ್ರಕ್ಕೆ ಅವನನ್ನು ಒಡೆಯುವುದು, ಬಡಿಯುವುದು, ಕೊಲೆ ಮಾಡುವ ಹಂತಕ್ಕೆ ಹೋಗುವುದು ಸರಿಯಲ್ಲ. ನಾವೆಲ್ಲರೂ ಸಂವಿಧಾನದ ಚೌಕಟ್ಟಿನಲ್ಲಿ ಬದುಕುತ್ತಿದ್ದೇವೆ. ಹಾಗಾಗಿ ಕಾನೂನಾತ್ಮಕವಾಗಿ ನಡೆದುಕೊಳ್ಳಬೇಕು ಎಂದರು.

ರೇಣುಕಾಸ್ವಾಮಿ ಅವರನ್ನು ಅತ್ಯಂತ ಕ್ರೂರವಾಗಿ ಕೊಲ್ಲಲಾಗಿದೆ. ಇದು ನಾಗರೀಕ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಖಂಡಿಸಬೇಕಾದ ವಿಚಾರ. ಅವರ ಕುಟುಂಬದ ಸದಸ್ಯರನ್ನು ನೋಡಿದರೆ ತುಂಬಾ ನೋವಾಗುತ್ತದೆ. ಮಾನವೀಯತೆಯ ಸಮಾಜ ಅವರ ಬೆಂಬಲಕ್ಕೆ ನಿಲ್ಲಬೇಕು. ಅವರ ನೋವಿಗೆ ಸ್ಪಂದಿಸುವ ಮೂಲಕ ತಮ್ಮ ಕೈಲಾದ ನೆರವು ನೀಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕಾನೂನಿ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅನುಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಆರ್ಥಿಕ ನೆರವು ನೀಡಿದರು. ಲಗ್ಗೆರೆ ನಾರಾಯಣಸ್ವಾಮಿ ಅವರ ಪತ್ನಿ ಹಾಗೂ ಬೆಂಗಳೂರು ಮಹಾ ನಗರಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಮಂಜುಳಾ, ಚಾಲಕರ ಪರಿಷತ್ ಅಧ್ಯಕ್ಷ ಸೋಮಶೇಖರ್, ಕಾಂಗ್ರೆಸ್ ಮುಖಂಡ ನಿರಂಜನ್, ರಾಜು, ಕೇಶವಮೂರ್ತಿ, ಜೆಡಿಎಸ್ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಓ.ಪ್ರತಾಪ್ ಜೋಗಿ, ಮನು ಬೊಮ್ಮಗಟ್ಟೆ, ಪರಭು ಎರೇನಹಳ್ಳಿ ಮತ್ತಿತರರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಾವೇರಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ | 13 ಮಂದಿ ಮೃತ, ನಾಲ್ವರ ಸ್ಥಿತಿ ಗಂಭೀರ….!

  ಹಾವೇರಿ, ಜೂನ್​ 28 : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದು, ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಜಿಲ್ಲೆಯ ಬ್ಯಾಡಗಿ

ಕೆಂಪು ಸೇಬು, ಹಸಿರು ಸೇಬು : ಮಧುಮೇಹ ರೋಗಿಗಳಿಗೆ ಯಾವುದು ಉತ್ತಮ…!

  ಸುದ್ದಿಒನ್ : ಸೇಬು ಎಲ್ಲರಿಗೂ ಪ್ರಿಯವಾದ ಹಣ್ಣು. ದಿನಕ್ಕೊಂದು ಸೇಬು ತಿನ್ನುವುದರಿಂದ ವೈದ್ಯರನ್ನು ದೂರವಿಡಬಹುದು ಎಂಬ ಮಾತಿದೆ. ಸೇಬು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಕ್ಯಾನ್ಸರ್ ತಡೆಗಟ್ಟುತ್ತದೆ. ಸೇಬು ತಿನ್ನುವುದು ಆರೋಗ್ಯಕ್ಕೆ ಉತ್ತಮ ಆಯ್ಕೆಯಾಗಿದೆ.

ಈ ರಾಶಿಯವರಿಗೆ ಮಧ್ಯಸ್ಥಿಕೆ ಜನರಿಂದ ದಂಪತಿಗಳಿಗೆ ದಾರಿ ತಪ್ಪಿಸಲಿದ್ದಾರೆ, ಈ ರಾಶಿಯವರಿಗೆ ಶತ್ರುಪೀಡೆ ಅಧಿಕ

ಈ ರಾಶಿಯವರಿಗೆ ಮಧ್ಯಸ್ಥಿಕೆ ಜನರಿಂದ ದಂಪತಿಗಳಿಗೆ ದಾರಿ ತಪ್ಪಿಸಲಿದ್ದಾರೆ, ಈ ರಾಶಿಯವರಿಗೆ ಶತ್ರುಪೀಡೆ ಅಧಿಕ, ಶುಕ್ರವಾರ ರಾಶಿ ಭವಿಷ್ಯ -ಜೂನ್-28,2024 ಸೂರ್ಯೋದಯ: 05:48, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ

error: Content is protected !!