ಕೋಲಾರ: ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಕೊತ್ತೂರು ಮಂಜುನಾಥ್ ತಿರುಗೇಟು ನೀಡಿದ್ದಾರೆ. ಧರ್ಮ ಇಲ್ಲ ಎಂದು ಹೇಳುವವರನ್ನು, ಆ ಧರ್ಮ ಈ ಧರ್ಮ ಎಂದು ಹೇಳುವವರನ್ನು ಗಡಿಪಾರು ಮಾಡಬೇಕು ಎಂದಿದ್ದಾರೆ. ಉದಯ ನಿಧಿ ಅವರಿಗೆ ದುಡ್ಡು ಜಾಸ್ತಿಯಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಕೋಲಾರದಲ್ಲಿ ಮಾತನಾಡಿ ಶಾಸಕ ಕೊತ್ತೂರು ಮಂಜುನಾಥ್, ಉದಯನಿಧಿ ಮೆಂಟಲ್ ಆಗಿದ್ದಾರೆ. ಹಣ ಜಾಸ್ತಿಯಾದ ಪರಿಣಾಮ ಮೆಂಟಲ್ ಆಗಿದ್ದಾರೆ. ನಾವೂ ಇರುವುದು ಭಾರತದಲ್ಲಿ. ಯಾರು ಯಾವ ಧರ್ಮ ಬೇಕಾದರೂ ಪಾಲನೆ ಮಾಡಬಹುದು. ನಿನ್ನ ಧರ್ಮವನ್ನು ನೀನು ಪಾಲನೆ ಮಾಡು, ನನ್ನ ಧರ್ಮವನ್ನು ನಾನು ಪಾಲನೆ ಮಾಡುತ್ತೇನೆ. ನನ್ನ ಧರ್ಮವನ್ನು ಪಾಲನೆ ಮಾಡಬೇಡ ಎನ್ನುವುದಕ್ಕೆ ಯಾರಿಗೂ ಹಕ್ಕು ಇಲ್ಲ ಎಂದು ಕೊತ್ತೂರು ಮಂಜುನಾಥ್ ಆಕ್ರೋಶ ಹೊರ ಹಾಕಿದ್ದಾರೆ.

ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು. ಆ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ, ಪರ ವಿರೋಧ ಕೇಳಿ ಬಂದಿತ್ತು. ಇದೀಗ ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸಿ, ಕೊತ್ತೂರು ಮಂಜುನಾಥ್ ಧರ್ಮದ ಬಗ್ಗೆ ಮಾತನಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















