ಸುದ್ದಿಒನ್, ಚಿತ್ರದುರ್ಗ, ಏ. 15 – ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಜಮುರಾ ಕಲಾಲೋಕದ ಸಂಗೀತ ಕಲಾವಿದರಾದ ತೋಟಪ್ಪ ಉತ್ತಂಗಿಯವರು ಬೆಂಗಳೂರು ಬಸವ ಸಮಿತಿಯ 2025ನೇ ಸಾಲಿನ ವರ್ಷದ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಅರವಿಂದ ಜತ್ತಿ ಅವರು ತಿಳಿಸಿದ್ದಾರೆ.
ತೋಟಪ್ಪ ಅವರು ಕಳೆದ 35 ವರ್ಷಗಳಿಂದ ವಚನ ಗಾಯಕರಾಗಿ, ವಚನ ಸಂಗೀತ, ರೂಪಕ ಮತ್ತು ನಾಟಕಗಳ ಮೂಲಕ ನಾಡಿನೆಲ್ಲೆಡೆ ಬಸವಪ್ರಜ್ಞೆಯನ್ನು ಹರಡುತ್ತ ಬಂದಿದ್ದಾರೆ. ಗದುಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ|| ಪುಟ್ಟರಾಜ ಗವಾಯಿಗಳ ಶಿಷ್ಯರಾಗಿ ಹಿಂದೂಸ್ಥಾನಿ ಸಂಗೀತ ಅಭ್ಯಾಸ ಮಾಡಿ, ವಿದ್ವತ್ ಪದವಿ ಪಡೆದಿದ್ದಾರೆ. ಸಂಗೀತ ನಿರ್ದೇಶಕರಾಗಿ, ಬಸವಾದಿ ಶರಣರು ರಚಿಸಿದ ವಚನಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಮುಂಬೈ, ದೆಹಲಿ, ಊಟಿ, ಪೂನಾ, ಗೋವಾ, ಹೈದರಾಬಾದ್, ದುಬೈ ಹಾಗೂ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಇವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಡೆಸಿದ ವಚನ ಸಂಗಿತೋತ್ಸವ, ಹಂಪಿ ಉತ್ಸವ, ದುರ್ಗೋತ್ಸವ, ಹಾವೇರಿ ಜಿಲ್ಲಾ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.
ಏಪ್ರಿಲ್ 30ರಂದು ಬಸವ ಸಮಿತಿಯಲ್ಲಿ ನಡೆಯುವ ವಿಶ್ವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಯು ಒಂದುಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















