Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕದ ಬದುಕನ್ನು ಅರ್ಥ ಮಾಡಿಕೊಳ್ಳಲು ಶ್ರೀಕೃಷ್ಣನ ವಿಚಾರಧಾರೆಗಳು ಅಗತ್ಯ : ಶಾಸಕ ಟಿ.ರಘುಮೂರ್ತಿ

---Advertisement---

ವರದಿ ಮತ್ತು ಫೋಟೋ ಕೃಪೆ, ಸುರೇಶ್ ಬೆಳಗೆರೆ             ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್.10 : ಲೋಕದ ಬದುಕನ್ನು ಅರ್ಥ ಮಾಡಿಕೊಳ್ಳಲು ಶ್ರೀಕೃಷ್ಣನ ವಿಚಾರಧಾರೆಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಶ್ರೀಕೃಷ್ಣ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯಲ್ಲಿ ಇಂದು ಹಮ್ಮಿಕೊಂಡಿದ್ದ ಶ್ರೀಕೃಷ್ಣ ಭಾವಚಿತ್ರ  ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ದೇಶದಲ್ಲಿ ಅಷ್ಟೇ ಅಲ್ಲದೆ ಹೊರದೇಶದಲ್ಲೂ ಸಹ ಶ್ರೀ ಕೃಷ್ಣನನ್ನು ಪೂಜಿಸುತ್ತಾರೆ.

ಆಚರಣೆಗಳು ಒಂದು ವರ್ಗಕ್ಕೆ ಸೀಮಿತವಾಗಬಾರದು. ಸಮಾಜದ ಮಹಾಪುರುಷರ ಬದುಕಿನ ಆದರ್ಶವನ್ನು ಪ್ರಸ್ತುತ ಸಮಾಜಕ್ಕೆ ಪರಿಚಯಿಸುವ ರೀತಿಯಲ್ಲಿರಬೇಕು. ಶ್ರೀಕೃಷ್ಣ ಭಗವಂತನ ವಿಚಾರ ಚಿಂತನೆಗಳು ಲೋಕ ಬದುಕಿನ ಸಾರ್ಥಕತೆ ಕಂಡುಕೊಳ್ಳುವ ಮಾರ್ಗವಾಗಿದೆ. ಕಾಡುಗೊಲ್ಲ ಸಮುದಾಯ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸಮಾಜಮುಖಿಯಾಗಿ ಬೆಳೆಯಬೇಕು ಎಂದು ಹೇಳಿದರು.

 

ಕಲಾತಂಡಗಳ ಮೆರುಗು ಕಾಟಪ್ಪನಹಟ್ಟಿಯಿಂದ ಆರಂಭಗೊಂಡ ಶ್ರೀಕೃಷ್ಣನ ಮೆರವಣಿಗೆ ಕಲಾ ತಂಡಗಳೊಂದಿಗೆ ನಗರದ ನೆಹರು ವೃತ್ತದ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.

ಕಾಡುಗೊಲ್ಲ ಸಮುದಾಯದ ಆಚರಣಾ ಪದ್ಧತಿಗಳಲ್ಲಿ ಒಂದಾದ ಮಣೇವು ಕುಣಿತ ವಿಶೇಷವಾಗಿತ್ತು. ಕಂಬಳಿ ಹಾಸಿ ಕಾಯಿ, ಬೆಲ್ಲ ಇರಿಸಿ ಸುತ್ತಲೂ ದೇವರ ಪದಗಳು ಹೇಳುತ್ತಾ ಕುಣಿದು ಬಳಿಕ ಕಂಬಳಿ ಮೇಲೆ ಇರಿಸಿದ ಕಾಯಿ, ಬೆಲ್ಲ ಪಡೆದು ಪ್ರಾಸಾದದಂತೆ ಸ್ವೀಕರಿಸುವುದು, ಮಣೇವು ಕುಣಿತ ಗಮನಸೆಳೆಯಿತು.

ಕಾಡುಗೊಲ್ಲರ ಸಂಘದ ತಾಲೂಕಾಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಜಿಪಂ ಮಾಜಿ ಅಧ್ಯಕ್ಷ ಟಿ.ರವಿಕುಮಾರ್, ತಾಪಂ ಮಾಜಿ ಅಧ್ಯಕ್ಷ ಉಪ್ಪಾರಹಟ್ಟಿ ಅಜ್ಜಣ್ಣ, ಬಿ.ವಿ.ಸಿರಿಯಪ್ಪ, ಹಟ್ಟಿರುದ್ರಪ್ಪ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಶಶಿಧರ, ಕಾಟಪ್ಪನಹಟ್ಟಿ ವೀರೇಶ್, ಜಿ.ಟಿ.ವೀರಣ್ಣ, ಮಹಾಲಿಂಗಪ್ಪ, ಕಾಂತರಾಜ್, ಚಿತ್ರಾವತಿ, ಚಾರುಮತಿ, ಸಾಕಮ್ಮ, ಗೀತಮ್ಮ, ಹನುಮಂತಪ್ಪ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...