Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರು ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ಮೂವರು ಸಾವು : ಸಿದ್ದರಾಮಯ್ಯ ಭೇಟಿ, ಪರಿಹಾರ ಘೋಷಣೆ, ಅಧಿಕಾರಿಗಳ ಅಮಾನತು..!

---Advertisement---

ಮೈಸೂರು: ಕಲುಷಿತ ನೀರು ಕುಡಿದು ಕೆ.ಸಾಲುಂಡಿ ಗ್ರಾಮದ ಅನೇಕ ಜನರು ಅಸ್ವಸ್ಥಗೊಂಡಿದ್ದರು. ಮೂರು ಜನ ಸಾವನ್ನಪ್ಪಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮೃತರಿಗೆ ಪರಿಹಾರವನ್ನು ನೀಡಿದ್ದಾರೆ. ಈ ಘಟನೆಗೆ ಸಂಬಂಧಪಟ್ಟ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

ಈ ಬಗ್ಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೋಗಾದಿ ಪಟ್ಟಣ ಪಂಚಾಯ್ತಿಯವರು ಪರೀಕ್ಷೆ ಮಾಡದೆ ನೀರು ಸರಬರಾಜು ಮಾಡಿದ್ದಾರೆ. ಕಲುಷಿತ ನೀರಿನಿಂದ ಕೆ.ಸಾಲುಂಡಿ ಗ್ರಾಮದ ಅನೇಕ ಜನ ಅಸ್ವಸ್ಥರಾಗಿದ್ದಾರೆ. ಬೋಗಾದಿ ಪಟ್ಟಣ ಪಂಚಾಯ್ತಿ ಚೀಫ್ ಆಫೀಸರ್, ಇಇ ಹಾಗೂ ಎಇಇ ಅವರನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

 

ಇದೆ ವೇಳೆ ಕೆ ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಕಾಂತರಾಜು ಅವರ ನಿವಾಸಕ್ಕೆ ಗುರುವಾರ ಸಂಜೆ ಸಿಎಂ ಸಿದ್ದರಾಮ್ಯಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಅವರು, ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಾಗೂ ಮೃತ ಕಾಂತರಾಜು ಅವರ ಸಹೋದರ ರವಿಗೆ ಉದ್ಯೋಗ ನೀಡಲಾಗುವುದು ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...