ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅರಳಸುರುಳಿಯ ಕೆಕೊಡ್ ನಲ್ಲಿ ನಡೆದಿದೆ. ಗಂಡ – ಹೆಂಡತಿ, ಒಬ್ಬ ಮಗ ಸಾವನ್ನಪ್ಪಿದ್ದು, ಒಬ್ಬ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟ ರಾಘವೇಂದ್ರ ಕೆಕೊಡ್ ಕುಟುಂಬ ಅರ್ಚಕ ವೃತ್ತಿಯನ್ನು ನಡೆಸುತ್ತಿತ್ತು. ಮನೆಯಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಹೊತ್ತುಕೊಂಡಿದ್ದು, 65 ವರ್ಷದ ರಾಘವೇಂದ್ರ, 55 ವರ್ಷದ ನಾಗರತ್ನಾ, ಹಿರಿಯ ಮಗ 30 ವರ್ಷದ ಶ್ರೀರಾಮ ಸಾವನ್ನಪ್ಪಿದ್ದಾರೆ. 28 ವರ್ಷದ ಮಗನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯ ಒಳಗೆ ಕಟ್ಟಿಗೆಗಳನ್ನು ಇಟ್ಟುಕೊಂಡಿದ್ದರು. ಈ ಕಟ್ಟಿಗೆಗೆ ಬೆಂಕಿ ತಾಕಿ ಈ ದುರ್ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಹೊತ್ತುಕೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳೀಯರು ಕೂಡ ಒಳಗಿದ್ದವರು ಹೊರ ತರಲು ಸಹಾಯ ಮಾಡಿದ್ದಾರೆ.
ಇನ್ನು ಈ ಸಾವಿನ ಸುತ್ತ ಹಲವು ಅನುಮಾನದ ಹುತ್ತ ಬೆಳೆದಿದೆ. ಕೌಟುಂಬಿಕ ಸಮಸ್ಯೆ ಕೂಡ ಇತ್ತು ಎನ್ನಲಾಗುತ್ತಿದೆ. ಹೀಗಾಗಿ ಇದು ಆತ್ಮಹತ್ಯೆಯೋ, ಆಕಸ್ಮಿಕವೋ ಎಂಬ ಅನುಮಾನ ಉಂಟಾಗಿದೆ. ಸದ್ಯ ಶಿವಮೊಗ್ಗ ಎಸ್ಪಿ ಜಿಕೆ ಮಿಥುನ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











