Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

---Advertisement---

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ ಕೋಚ್ ಆಗಿ ರಾಹುಲ್ ದ್ರಾವಿಡ್ ಇದ್ದರು. ಆದರೆ ಈಗ ಅವರ ಕೋಚ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಹೊಸ ಕೋಚ್ ಆಯ್ಕೆಯ ಪ್ರಕ್ರಿಯೆ ನಡೆಸಲಾಗುತ್ತಿದೆ.

ಈಗಾಗಲೇ ಬಿಸಿಸಿಐ ಕಾರ್ಯದರ್ಶಿ ಟೀಂ ಇಂಡಿಯಾ ಕೋಚ್ ಗೆ ಹುದ್ದೆ ಅರ್ಜಿ ಆಹ್ವಾನಿಸಲಾಗುತ್ತೆ. ಆ ಸಮಯದಲ್ಲು ರಾಹುಲ್ ದ್ರಾವಿಡ್ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು. ಆಮೇಲೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಮುಂದಿನ ಮೂರು ವರ್ಷಕ್ಕೆ ಕೋಚ್ ನೋಡುತ್ತಿದ್ದೇವೆ ಎಂದಿದ್ದಾರೆ. ಈಗಾಗಲೇ ಈ ರೇಸ್ ನಲ್ಲಿ ಮೂವರ ಹೆಸರು ಕೂಡ ಕೇಳಿ ಬರುತ್ತಿದೆ. ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್, ಗುಜರಾತ್ ಟೈಟನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ, ಮಾಜಿ ಆಸಿಸ್ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೆಸರುಗಳು ಓಡಾಡುತ್ತಿವೆ. ಆದರೆ ಕನ್ನಡಿಗರ ಆಸೆ ಮತ್ತೆ ರಾಹುಲ್ ದ್ರಾವಿಡ್ ಮುಂದುವರೆಯಲಿ ಎಂಬುದಾಗಿದೆ.

ಟೀ ಇಂಡಿಯಾದ ಕೋಚ್ ಆಗಿ ರಾಹುಲ್ ದ್ರಾವಿಡ್ 3 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಆದರೆ ಅವರ ಅಧಿಕಾರಾವಧಿ ಏಕದಿನ ವಿಶ್ವಕಪ್ ವೇಳೆಯೇ ಅಂತ್ಯವಾಗಿತ್ತು. ಆದರೆ ಟಿ20 ವಿಶ್ವಕಪ್ ಹಿತದೃಷ್ಟಿಯಿಂದ ಅವರ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಆ ಅವಧಿಯು ಮುಕ್ತಾಯಗೊಂಡಿರುವ ಕಾರಣ, ಬಿಸಿಸಿಐ ಹೊಸ ಕೋಚ್ ನೇಮಕಕ್ಕೆ ಅರ್ಜಿ ಆಹ್ವಾನಿಸಲು ತೀರ್ಮಾನ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment