Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆಗೆ ಚಿತ್ರದುರ್ಗ ಜಿಲ್ಲೆಯಿಂದ ಮೂವರ ಹೆಸರು ಪ್ರಸ್ತಾಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 07 : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ ಮೂರು ದಿನಗಳ ಕಾಲ ಮಂಡ್ಯದಲ್ಲಿ ಏರ್ಪಡಿಸಲಾಗಿದೆ. ಮೂರು ದಿನಗಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗಾಗಿ ರಾಜ್ಯ ಕಾರ್ಯಕಾರಿಣಿ ಸಭೆ ಶೀಘ್ರದಲ್ಲಿ ಜರುಗಲಿದೆ.

ರಾಜ್ಯದಲ್ಲಿ ಪ್ರಕ್ರಿಯೆಯಲ್ಲಿರುವ ಉಪ ಚುನಾವಣೆಗಳು ಮುಗಿದ ತಕ್ಷಣ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗುವುದು. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಚಿತ್ರದುರ್ಗ ಜಿಲ್ಲೆಯಿಂದ ಮೂರು ಹೆಸರುಗಳನ್ನು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.

ಸಾಹಿತ್ಯ ಮತ್ತು ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಿಂದ ಜಿಲ್ಲೆ ಮತ್ತು ರಾಜ್ಯದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು, ಸಾಹಿತಿ ಮತ್ತು ಇತಿಹಾಸಕಾರ ಡಾ.ಬಿ.ರಾಜಶೇಖರಪ್ಪ ಖ್ಯಾತ ಸಾಹಿತಿ ಬಿ.ಎಲ್.ವೇಣು ರವರನ್ನು ಹೆಸರುಗಳನ್ನು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹಲವಾರು ಚರ್ಚೆಗಳು ಜರುಗುತ್ತಿವೆ. ಜಿಲ್ಲೆಯಲ್ಲಿ ಈ ಮೂವರನ್ನು ಹೊರುತುಪಡಿಸಿ ಇನ್ನಷ್ಟು ಸಾಹಿತಿಗಳು ಅರ್ಹರಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಅವರುಗಳಿಗೆ ಆದ್ಯತೆ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಮೂವರ ಹೆಸರುಗಳನ್ನು ಚಿತ್ರದುರ್ಗ ಜಿಲ್ಲೆಯ ವತಿಯಿಂದ ರಾಜ್ಯ ಕಾರಿಣಿ ಸಭೆಯಲ್ಲಿ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಅಂತಿಮ ನಿರ್ಧಾರ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಗೊಳ್ಳಲಿದೆ. ಈ ಬಗ್ಗೆ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿಯವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...