Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

---Advertisement---

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಆ ಘಟನೆ ಮಾಸುವ ಮುನ್ನವೇ ಮಂಡ್ಯದಲ್ಲೂ ಅಂಥದ್ದೇ ಒಂದು ಘಟನೆ ನಡೆದಿದೆ. ಸಾಲದ ಸುಳಿಯಿಂದ ನಲುಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ನಡೆದಿರೋದು ಮಂಡ್ಯ ತಾಲೂಕಿನ ವಿಸಿ ನಾಲೆಯಲ್ಲಿ. ಮೃತರು 3 ಲಕ್ಷ ಸಾಲ ಮಾಡಿಕೊಂಡಿದ್ದರಂತೆ. ಆದರೆ ಆ ಸಾಲ ತೀರಿಸುವುದು ತಡವಾಗಿದೆ. ಇದರಿಂದ ಸಾಲಗಾರರು ಮನೆ ಬಳಿ ಬಂದಿ ಗಲಾಟೆ ಮಾಡಿದ್ದರಂತೆ. ಏನೇ ಆಗಲಿ ಮರ್ಯಾದೆಗೆ ಭಯ ಪಡುವ ಜನರಾಗಿರುವ ಕಾರಣ, ಆ ಘಟನೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮುಂದಾಗುವಷ್ಟು ಮನಸ್ಸಿನ ಮೇಲೆ ಪರಿಣಾಮ ಬೀರಿದೆ. ಸಾಲಗಾರರು ಮನೆ ಬಾಗಿಲಿಗೆ ಬಂದು ಜಗಳವಾಡಿ ಹೋದ ಮೇಲೆ, ಮನೆಯಲ್ಲಿದ್ದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊದಲು ವಿಷ ಸೇವಿಸಿದ ಮೂವರು ಬಳಿಕ ವಿಸಿ ನಾಲೆಗೆ ಬಂದು ಹಾರಿ, ಪ್ರಾಣ ಕಳೆದುಕೊಂಡಿದ್ದಾರೆ. ಸಾಲ‌ ಕೊಟ್ಟವರು ಯಾರು..? ಫೈನಾನ್ಸ್ ಕಂಪನಿಯವರೇನಾದರೂ ಕೊಟ್ಟರಾ ಎಂಬೆಲ್ಲಾ ಮಾಹಿತಿ ಇನ್ನು ತಿಳಿಯಬೇಕಿದೆ. ಮೃತರು ಮೂಲತಃ ಯಾವ ಗ್ರಾಮದವರು ಎಂಬ ಯಾವ ಮಾಹಿತಿಯೂ ಇನ್ನು ತಿಳಿದು ಬಂದಿಲ್ಲ. ಇದೇ ಕಾರಣಕ್ಕಾಗಿಯೇ ಸರ್ಕಾರ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಸುಗ್ರಿವಾಜ್ಞೆ ಹೊರಡಿಸಿರೋದು. ಸಾಲ ಸುಲಭಕ್ಕೆ ಸಿಗುತ್ತದೆ ಎಂದು ತೆಗೆದುಕೊಂಡು, ಅದನ್ನು ಕಟ್ಟುವ ಮಾರ್ಗ ಸಿಗದೆ ಇದ್ದಾಗ, ಮರ್ಯಾದೆಯ ಪ್ರಶ್ನೆ ಎದುರಾದಾಗ, ಗೌರವಕ್ಕೆ ಹೆಚ್ಚು ಒತ್ತು ಕೊಡುವ ಕುಟುಂಬವಾದರೆ ಈ ರೀತಿಯ ಘಟನೆಯನ್ನೆಲ್ಲಾ ತಡೆದುಕೊಳ್ಳುವುದು ಕಷ್ಟವಾಗುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment