ಸಿಂಗರ್ ಮಂಗ್ಲಿ ಕಾರಿಗೆ ಬಳ್ಳಾರಿಯಲ್ಲಿ ಕಲ್ಲು ತೂರಾಟ : ಮಂಗ್ಲಿ ಪರಿಸ್ಥಿತಿ ಹೇಗಿದೆ..?

Facebook
Twitter
Telegram
WhatsApp

ಬಳ್ಳಾರಿ: ರಾಬರ್ಟ್ ಸಿನಿಮಾದ ತೆಲುಗು ವರ್ಷನ್ ಗೆ ಧ್ವನಿ ನೀಡಿ, ಖ್ಯಾತಿ ಪಡೆದಿದ್ದ ಗಾಯಕಿ ಮಂಗ್ಲಿ ಕಾರಿಗೆ ಪುಂಡರು ಕಲ್ಲು ತೂರಿದ್ದಾರೆ. ಗಾಯಕಿ ಮಂಗ್ಲಿ ಆ ಸಮಯದಲ್ಲಿ ಕಾರಿನ ಒಳಗೆ ಇದ್ದರು. ಸದ್ಯ ಕಾರಿನ ಒಳಗಿದ್ದವರಿಗೆ ಯಾವುದೇ ಸಮಸ್ಯೆ ಆಗಿಲ್ಲ.

ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಿಂಗರ್ ಮಂಗ್ಲಿಯನ್ನು ಗೆಸ್ಟ್ ಆಗಿ ಕರೆದಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಮಂಗ್ಲಿ, ಹಾಡನ್ನು ಹಾಡಿ ನೆರೆದಿದ್ದ ಜನರನ್ನು ರಂಜಿಸಿದ್ದಾರೆ. ಮಂಗ್ಲಿ ಹಾಡಿಗೆ ಶಿಳ್ಳೆ, ಚಪ್ಪಾಳೆ ಸಿಕ್ಕಿದೆ.

ಆದರೆ ಹಾಡನ್ನೆಲ್ಲಾ ಹಾಡಿ ವೇದಿಕೆಯಿಂದ ಇಳಿಯುವಾಗ ನೂಕು ನುಗ್ಗಲಾಗಿದೆ. ಮಂಗ್ಲಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ಮೇಕಪ್ ಟೆಂಟ್ ಗೂ ಪುಂಡರು ನುಗ್ಗಿದ್ದಾರೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು ಬಗ್ಗಿಲ್ಲ. ಬಳಿಕ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾರಿನ ಗಾಜು ಪುಡಿ ಪುಡಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇಕದಾಟು ಅಣೆಕಟ್ಟು ನಿರ್ಮಾಣ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ : ಸಚಿವ ಕೆ.ಹೆಚ್.ಮುನಿಯಪ್ಪ

  ಚಿತ್ರದುರ್ಗ, ಸೆಪ್ಟೆಂಬರ್, 23 : ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿ ವರ್ಷ 177  ಟಿಎಂಸಿ ನೀರು ತಮಿಳುನಾಡಿಗೆ ನೀಡಬೇಕು. ಆದರೆ ಕಳೆದ ವರ್ಷ 600 ಟಿಎಂಸಿ ನೀರು ವೃಥಾ ಹರಿದು

ಕಾವೇರಿ ಕಿಚ್ಚು : ಚಿತ್ರದುರ್ಗದಲ್ಲಿ ಕರವೇ ಪ್ರವೀಣ್‍ಕುಮಾರ್ ಶೆಟ್ಟಿ ಬಣ ಪ್ರತಿಭಟನೆ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23  : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಹಾಗೂ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಶನಿವಾರ

ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ  ಮುಂಢ್ಕರ್ ಅಗ್ನಿಶಾಮಕ  ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ

error: Content is protected !!