Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಸಿಡಿಲು ಬಡಿದು ಹಾನಿ ; ಪ್ರಾಣಾಪಾಯದಿಂದ ಪಾರಾದ ಕುಟುಂಬ

Facebook
Twitter
Telegram
WhatsApp

ನಾಯಕನಹಟ್ಟಿ : ಹೋಬಳಿಯ ಮಲ್ಲೂರ ಹಳ್ಳಿ ಗ್ರಾಮದ ಜಮೀನಿನಲ್ಲಿ ನಿರ್ಮಿಸಿಕೊಂಡಿರುವ ಮನೆಗೆ ಗುರುವಾರ ಸಿಡಿಲು ಬಡಿದು ಸಂಪೂರ್ಣವಾಗಿ ಹಾನಿಯಾಗಿದೆ.

ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಮುಗುಚಿ ಬಿದ್ದಿದ್ದು ಈ ಮನೆಯು ಪರ್ವತಯ್ಯ ಎಂಬ ರೈತರಿಗೆ ಸೇರಿದ್ದಾಗಿದೆ. ಮನೆಯಲ್ಲಿ ನಾಗರಾಜ ಮಲ್ಲೇಶ ಮಲ್ಲಮ್ಮ ಎಂಬ ಒಂದೇ ಕುಟುಂಬದ ಮೂರು ಜನರಿದ್ದು,
ಸಣ್ಣಪುಟ್ಟ ಗಾಯಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಗೇ ತಳಕು ಹೋಬಳಿಯಲ್ಲಿ ಬುಧವಾರ ಸಂಜೆ ಸುರಿದ ಮಳೆ ಹಾಗೂ ಬಿರುಗಾಳಿಗೆ 8ಮನೆಗಳಿಗೆ ಹಾನಿಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ನಾಲ್ಕು ಹೋರಿಗಳು, 12ತೆಂಗಿನ ಮರಗಳು, 8ಮನೆಗಳು ಗೋಡೆಗಳು, ಶೀಟ್ ಗಳು, ಮೇಲ್ಛಾವಣಿಗಳು ಬಿದ್ದಿವೆ.

ಈ ಸಂಬಂಧ ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಮಲ್ಲೂರಹಳ್ಳಿ ಗ್ರಾಮದ ಸರ್ವೇ ನಂ.106ರಲ್ಲಿ ಮನೆಕಟ್ಟಿಕೊಂಡು ಜೀವಿಸುತ್ತಿರುವ ಪರ್ವತಯ್ಯ ಎಂಬ ರೈತನ ಮನೆಗೆ ಭೇಟಿನೀಡಿ ಸಾಂತ್ವನ ಹೇಳಿದರು.

ಹಾಗೇ  ಮನೆ ಕಳೆದುಕೊಂಡವರಿಗೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಇಂದೇ ಪ್ರಾಥಮಿಕ ವರದಿಯನ್ನು ತಯಾರಿಸಿ  ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಹಾಗೇ ತಾಲೂಕು ಆಡಳಿತದ ಅಂದಾಜು ವರದಿಯ ಪ್ರಕಾರ ಚಳ್ಳಕೆರೆ ತಾಲ್ಲೂಕಿನ ತಳಕು ಹಾಗೂ ನಾಯಕನಹಟ್ಟಿ ಹೋಬಳಿಯಲ್ಲಿ ಅತಿಹೆಚ್ಚು ಶೀಟಿನ ಮನೆಗಳು ಹಳೆಯ ಮನೆಗಳು ದುರಸ್ಥಿಯಲ್ಲಿರುವ ಮನೆಗಳು ಇವೆ ಎಂದು ಕಂಡು ಬರುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ.

ಹಾಗಾಗಿ ಆರಂಭದಲ್ಲಿ ಮಳೆಯ ಆರ್ಭಟ ಜೋರಾಗಿರುತ್ತದೆ ಹಾಗಾಗಿ ಸಾರ್ವಜನಿಕರು ಹಳೆಯ ಗೋಡೆಗಳ ಪಕ್ಕದಲ್ಲಿ ಮರಗಳ ಕೆಳಗಡೆ ವಿದ್ಯುತ್ ಪರಿವರ್ತಕಗಳ ಬಳಿ ಹಾಗೂ ವಿದ್ಯುತ್ ಕಂಬಗಳ ಬಳಿ ಮೊಬೈಲ್ ಗಳ ಟವರ್ ಬಳಿ ನಿಲ್ಲುವುದಾಗಿ ತಂಗುವುದು ಆಗಲಿ ಮಾಡಬಾರದು ಕಾರಣ ಎಲ್ಲಾ ತಾಣಗಳಲ್ಲಿ ಸಿಡಿಲಿನ ಆಕರ್ಷಣೆ ಹೆಚ್ಚಾಗಿರುತ್ತದೆ ಇದರಿಂದ ಪ್ರಾಣ ಹಾನಿ ಸಂಭವ ಹೆಚ್ಚಾಗಿರುತ್ತದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!