ಚಿತ್ರದುರ್ಗ | ಸಿಡಿಲು ಬಡಿದು ಹಾನಿ ; ಪ್ರಾಣಾಪಾಯದಿಂದ ಪಾರಾದ ಕುಟುಂಬ

ನಾಯಕನಹಟ್ಟಿ : ಹೋಬಳಿಯ ಮಲ್ಲೂರ ಹಳ್ಳಿ ಗ್ರಾಮದ ಜಮೀನಿನಲ್ಲಿ ನಿರ್ಮಿಸಿಕೊಂಡಿರುವ ಮನೆಗೆ ಗುರುವಾರ ಸಿಡಿಲು ಬಡಿದು ಸಂಪೂರ್ಣವಾಗಿ ಹಾನಿಯಾಗಿದೆ.

ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಮುಗುಚಿ ಬಿದ್ದಿದ್ದು ಈ ಮನೆಯು ಪರ್ವತಯ್ಯ ಎಂಬ ರೈತರಿಗೆ ಸೇರಿದ್ದಾಗಿದೆ. ಮನೆಯಲ್ಲಿ ನಾಗರಾಜ ಮಲ್ಲೇಶ ಮಲ್ಲಮ್ಮ ಎಂಬ ಒಂದೇ ಕುಟುಂಬದ ಮೂರು ಜನರಿದ್ದು,
ಸಣ್ಣಪುಟ್ಟ ಗಾಯಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಗೇ ತಳಕು ಹೋಬಳಿಯಲ್ಲಿ ಬುಧವಾರ ಸಂಜೆ ಸುರಿದ ಮಳೆ ಹಾಗೂ ಬಿರುಗಾಳಿಗೆ 8ಮನೆಗಳಿಗೆ ಹಾನಿಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ನಾಲ್ಕು ಹೋರಿಗಳು, 12ತೆಂಗಿನ ಮರಗಳು, 8ಮನೆಗಳು ಗೋಡೆಗಳು, ಶೀಟ್ ಗಳು, ಮೇಲ್ಛಾವಣಿಗಳು ಬಿದ್ದಿವೆ.

ಈ ಸಂಬಂಧ ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಮಲ್ಲೂರಹಳ್ಳಿ ಗ್ರಾಮದ ಸರ್ವೇ ನಂ.106ರಲ್ಲಿ ಮನೆಕಟ್ಟಿಕೊಂಡು ಜೀವಿಸುತ್ತಿರುವ ಪರ್ವತಯ್ಯ ಎಂಬ ರೈತನ ಮನೆಗೆ ಭೇಟಿನೀಡಿ ಸಾಂತ್ವನ ಹೇಳಿದರು.

ಹಾಗೇ  ಮನೆ ಕಳೆದುಕೊಂಡವರಿಗೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಇಂದೇ ಪ್ರಾಥಮಿಕ ವರದಿಯನ್ನು ತಯಾರಿಸಿ  ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಹಾಗೇ ತಾಲೂಕು ಆಡಳಿತದ ಅಂದಾಜು ವರದಿಯ ಪ್ರಕಾರ ಚಳ್ಳಕೆರೆ ತಾಲ್ಲೂಕಿನ ತಳಕು ಹಾಗೂ ನಾಯಕನಹಟ್ಟಿ ಹೋಬಳಿಯಲ್ಲಿ ಅತಿಹೆಚ್ಚು ಶೀಟಿನ ಮನೆಗಳು ಹಳೆಯ ಮನೆಗಳು ದುರಸ್ಥಿಯಲ್ಲಿರುವ ಮನೆಗಳು ಇವೆ ಎಂದು ಕಂಡು ಬರುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ.

ಹಾಗಾಗಿ ಆರಂಭದಲ್ಲಿ ಮಳೆಯ ಆರ್ಭಟ ಜೋರಾಗಿರುತ್ತದೆ ಹಾಗಾಗಿ ಸಾರ್ವಜನಿಕರು ಹಳೆಯ ಗೋಡೆಗಳ ಪಕ್ಕದಲ್ಲಿ ಮರಗಳ ಕೆಳಗಡೆ ವಿದ್ಯುತ್ ಪರಿವರ್ತಕಗಳ ಬಳಿ ಹಾಗೂ ವಿದ್ಯುತ್ ಕಂಬಗಳ ಬಳಿ ಮೊಬೈಲ್ ಗಳ ಟವರ್ ಬಳಿ ನಿಲ್ಲುವುದಾಗಿ ತಂಗುವುದು ಆಗಲಿ ಮಾಡಬಾರದು ಕಾರಣ ಎಲ್ಲಾ ತಾಣಗಳಲ್ಲಿ ಸಿಡಿಲಿನ ಆಕರ್ಷಣೆ ಹೆಚ್ಚಾಗಿರುತ್ತದೆ ಇದರಿಂದ ಪ್ರಾಣ ಹಾನಿ ಸಂಭವ ಹೆಚ್ಚಾಗಿರುತ್ತದೆ ಎಂದರು.

suddionenews

Recent Posts

ಕುಂಭಮೇಳ ಕಾಲ್ತುಳಿತದಲ್ಲಿ ಚಿತ್ರದುರ್ಗದ ವ್ಯಕ್ತಿ ಸಾವನ್ನಪ್ಪಿಲ್ಲ : ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸ್ಪಷ್ಟನೆ

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು…

2 hours ago

ಅರಿಶಿನವನ್ನು ನೇರವಾಗಿ ಮುಖಕ್ಕೆ ಹಚ್ಚುತ್ತಿದ್ದೀರಾ.. ಈ ವಿಷಯಗಳನ್ನು ನೆನಪಿನಲ್ಲಿಡಿ!

ಸುದ್ದಿಒನ್ : ಅರಿಶಿನವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಅನೇಕ ಜನರಿಗೆ ತಿಳಿದಿದೆ. ಅರಿಶಿನದಿಂದ ದೇಹದ ಆರೋಗ್ಯ ಮತ್ತು…

2 hours ago

ಈ ರಾಶಿಯವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ನೌಕರಿ ಸಿಗಲಿದೆ

ಈ ರಾಶಿಯವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ನೌಕರಿ ಸಿಗಲಿದೆ, ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ವಿದೇಶ ಪ್ರವಾಸ, ಶನಿವಾರದ ರಾಶಿ…

3 hours ago

ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ : ಚಿತ್ರದುರ್ಗದ ನಾಗಸಾಧು ಸಾವು..!

ಪ್ರಯಾಗ್ ರಾಜ್: ಎಷ್ಟೋ ದಶಕಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಭಾಗವಹಿಸಬೇಕೆಂದು ದೇಶದ ಎಲ್ಲರ ಆಸೆ. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಬರಬೇಕೆಂದು ಕೋಟ್ಯಾಂತರ…

12 hours ago

ಫೆ.04ರಂದು ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ

ಚಿತ್ರದುರ್ಗ. ಜ.31: ಇತ್ತೀಚಿಗೆ ಮೈಕ್ರೋಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳಿಂದ ತನ್ನ ಸಾಲಗಾರರಿಗೆ ಅತಿಯಾಗಿ ಬಡ್ಡಿ ವಿಧಿಸುತ್ತಿರುವುದು ಹಾಗೂ ಸಾಲ…

12 hours ago

ಪೋಷಕರು ಮಕ್ಕಳಿಗೆ ಮೊಬೈಲ್ ಗೀಳನ್ನು ಬಿಡಿಸಿ ಹೆಚ್ಚು ಅಂಕಗಳನ್ನು ಗಳಿಸಲು ಉತ್ತೇಜಿಸಿ : ಶ್ರೀಮತಿ ಉಜ್ವಲ ವೀರಣ್ಣ ಸಿದ್ದಣ್ಣನವರ್

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವತಿಯಿಂದ ದಿನಾಂಕ : 31.01.2025ರ ಗುರುವಾರ…

13 hours ago