in

ಇಂದು ಸಂಜೆ ಮತ್ತೆ ಗುಡುಗು ಸಹಿತ ಮಳೆ : ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ..!

suddione whatsapp group join

ಬೆಂಗಳೂರು: ಕಳೆದ ಎರಡು ದಿನದಿಂದ ರಾಜ್ಯದಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದೆ. ಇಂದು ಸಂಜೆ ಕೂಡ ಮತ್ತೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವ ಕಾರಣ, ವಿದ್ಯುತ್ ನಲ್ಲಿ ವ್ಯತ್ಯಯವಾಗಲಿದೆ. ಕಳೆದ ಎರಡು ದಿನದಿಂದ ವಿದ್ಯುತ್ ಕಡಿತವಾಗುತ್ತಿದೆ.

ಇಂದು ಬೆಳಗ್ಗೆಯಿಂದಾನೂ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ರಾಜ್ಯದ ವಿವಿದೆಡೆ ಇನ್ನು ಎರಡು ದಿನ ಭರ್ಜರಿ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಮೈಸೂರು, ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ರಾಯಚೂರು ಭಾಗದಲ್ಲಿ ಎರಡು ದಿನ ಮಳೆಯಾಗಲಿದೆ.

ಮಳೆಯಿಂದಾಗಿ ಟ್ರಾಫಿಕ್ ಸಮಸ್ಯೆಯೂ ಎದುರಾಗಬಹುದು. ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ‌. ಗಾಳಿಯೊಂದಿಗೆ ಜೋರು ಮಳೆಯಾಗಲಿದೆ. ಹೊರಗೆ ಹೋಗುವ ಜನ ಕೂಡ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ. ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಚುನಾವಣೆಗೆ 9 ದಿನ ಇರುವಾಗ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಉಪೇಂದ್ರ..!

ಪ್ರಣಾಳಿಕೆಯಲ್ಲಿ ಭರವಸೆಗಳ ಸುರಿಮಳೆ ; ಮತದಾರರನ್ನು ಆಕರ್ಷಿಸಲು ಬಿಜೆಪಿ ಏನೆಲ್ಲಾ ಘೋಷಿಸಿದೆ ?