Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಈ ವಾರ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

---Advertisement---

 

ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಲ್ಲಿ ವರುಣನ ಆರ್ಭಟ :
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಈಗಾಗಲೇ ನಗರದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಮಳೆ ಅಬ್ಬರ :

ಕೇವಲ ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ರಾಮನಗರದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಮಲೆನಾಡಿನ ಭಾಗಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರು ಜಾಗರೂಕರಾಗಿರುವುದು ಉತ್ತಮ.

ಕರಾವಳಿ ಮತ್ತು ಉತ್ತರ ಒಳನಾಡು :
ಕರಾವಳಿ: ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿದ್ದರೂ ಸಂಜೆ ವೇಳೆಗೆ ಮೋಡ ಕವಿಯಲಿದೆ.

ಉತ್ತರ ಒಳನಾಡು: ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಬಿಸಿಲು ಮುಂದುವರಿಯಲಿದ್ದು, ಮೇ 7ರಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now