ಬೆಂಗಳೂರು: ಸದ್ಯಕ್ಕೆ ಬೆಳಗಾವಿ ರಾಜಕಾರಣದಲ್ಲಿ ಈಗಾಗಲೇ ಟಿಕೆಟ್ ಫೈಟ್ ಶುರುವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಎಲ್ಲವೂ ಸರಿ ಇಲ್ಲ ಎಂಬುದೇನೋ ಆಗಾಗ ಪ್ರೂವ್ ಆಗ್ತಾ ಇದೆ. ಇದೀಗ ಶಾಸಕ ಮುನಿರತ್ನ ಅವರು ಲೋಕಸಭಾ ಚುನಾವಣೆಯ ಸೀಕ್ರೆಟ್ ಒಂದನ್ನು ಹೇಳಿದ್ದಾರೆ.
‘ನನಗೆ ಗೊತ್ತಿರುವಂತೆ ಸತೀಶ್ ಜಾರಕಿಹೊಳಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಸತೀಶ್ ಜಾರಕಿಹೊಳಿ ಇಷ್ಟಯ ದಿನ ನಮ್ಮ ಬೆಳಗಾವಿ, ನಮ್ಮ ಭದ್ರಕೋಟೆ ಎಂದುಕೊಂಡಿದ್ದರು. ಅದೆಲ್ಲೋ ಒಂದು ಕಡೆ ಕೈತಪ್ಪಿ, ಅವರ ಕುಟುಂಬಕ್ಕೆ ಟಿಕೆಟ್ ಸಿಗುವುದು ಅನುಮಾನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಮಗನಿಗೆ ಲೋಕಸಭಾ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇದನ್ನ ನಾನು ಹೇಳ್ತಿಲ್ಲ. ಜನರೇ ಹೇಳಿತ್ತಿದ್ದಾರೆ. ಅವರೆಲ್ಲ 135 ಜನ ಒಂದೇ ಪಕ್ಷದಲ್ಲಿದ್ದಾರೆ’.

ಅಷ್ಟು ಜನ ಒಟ್ಟಿಗೆ ಹೋಗುತ್ತಿದ್ದಾರೆ ಎಂದರೆ ಎಷ್ಟು ಒಗ್ಗಟ್ಟಿದೆ ಎಂಬುದು ಗೊತ್ತಾಗುತ್ತೆ. ಆದರೆ ಸತೀಶ್ ಜಾರಕಿಹೊಳಿ ವೀಕ್ ಆಗುತ್ತಿದ್ದಾರೆ. ಬೆಳಗಾವಿಯಲ್ಲಿ ಅವರಿಗೆ ಇದ್ದ ವರ್ಚಸ್ಸು ಕಡಿಮೆ ಆಗ್ತಾ ಇದೆ. ಮುಂದೊಂದು ದಿನ ಮೂಲೆ ಗುಂಪಾಗಲಿದ್ದಾರೆ. ಸತೀಶ್ ಜಾರಕಿಹೊಳಿಯ ಭದ್ರಕೋಟೆಯ ಒಂದೊಂದೆ ಕಲ್ಲು ಬೀಳುತ್ತಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















