Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಗನಿಗೆ ಟಿಕೆಟ್ : ಎಸ್ ಎಸ್ ಮಲ್ಲಿಕಾರ್ಜುನ ಅವರ ಫಸ್ಟ್ ರಿಯಾಕ್ಷನ್

---Advertisement---

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಅನ್ನು ಈ ಬಾರಿ ಶಾಮನೂರು ಕುಟುಂಬವೇ ಪಡೆದುಕೊಂಡಿದೆ. ಸಮರ್ಥ್ ಶಾಮನೂರಿಗೆ ಟಿಕೆಟ್ ಘೋಷಣೆಯಾಗಿದ್ದು, ಎಸ್ ಎಸ್ ಮಲ್ಲಿಕಾರ್ಜುನ ಅವರು ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಸಭೆ ಮಾಡಿ, ಎಲ್ಲರ ಮನಸ್ಸು ಗೆದ್ದು, ಒಗ್ಗಟ್ಟಾಗಿ ನಿಂತು ಬಾಗಲಕೋಟೆ ಹಾಗೂ ದಾವಣಗೆರೆ ಅಭ್ಯರ್ಥಿಯನ್ನ ಗೆಲ್ಲಿಸಲೇಬೇಕೆಂದು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಇದಕ್ಕೆ ಕೆಪಿಸಿಸಿ ಹಾಗೂ ಎಐಸಿಸಿಗೆ ನಾನು ಧನ್ಯವಾದ ಹೇಳ್ತೇನೆ. ಹಾಗೇ ಎಲ್ಲರೂ ಒಗ್ಗಟ್ಟಾಗಿ ನಿಂತು ಕೆಲಸ ಮಾಡೋಣಾ ಎಂದಿದ್ದಾರೆ.

ಇದೇ ವೇಳೆ ನಿಮ್ಮ ಮಗನಿಗೆ ಟಿಕೆಟ್ ನೀಡಿದ್ದಕ್ಕೆ ಅಲ್ಪಸಂಖ್ಯಾತರಿಗೆ ಬೇಸರವಿಲ್ಲವಾ ಎಂಬ ಪ್ರಶ್ನೆಗೆ, ಹೈಕಮಾಂಡ್ ಎಲ್ಲಾ ನಾಯಕರ ಜೊತೆಗೆ ಕೂತು ಮಾತನ್ನಾಡಿದೆ. ನಮ್ಮ ನಾಯಕರ ಮನಸ್ಸಲ್ಲಿಂದ ಬೇಸರವನ್ನು ಬದಲಾಯಿಸಿ, ಎಲ್ಲರ ಒಪ್ಪಿಗೆ ಮೇರೆಗೆ ಇಂದು ನಮ್ಮ ಮಗನಿಗೆ ಟಕೆಟ್ ಘೋಷಣೆ ಮಾಡಿದೆ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಮಾನ ಮನಸ್ಕರಂತೆ, ಅಣ್ಣ ತಮ್ಮಂದಿರಂತೆಯೇ ಇದ್ದೀವಿ. ಯಾವ ಮನಸ್ತಾಪವೂ ಇಲ್ಲ. ಇಂದಿನಿಂದಲೇ ಪ್ರಚಾರ ಕಾರ್ಯ ಶುರುವಾಗುತ್ತೆ. ಚುನಾವಣೆ ಅಂತ ಬಂದಾಗ ನಾನ್ ನಿಲ್ತೇನೆ ಅಂತ ಸುಮಾರು ಜನ ಹೇಳ್ತಾರೆ. ಅಂತಿಮವಾಗಿ ತೀರ್ಮಾನ ಮಾಡೋದು ಹೈಕಮಾಂಡ್ ಅಲ್ವಾ. ಅದರಲ್ಲೂ ನಾವೂ ಕಾಂಗ್ರೆಸ್ ಫ್ಯಾಮಿಲಿ ಅವರು ಸುಮಾರು 40 ವರ್ಷಗಳಿಂದಲೂ ನಮ್ಮ ತಂದೆಯವರು ಅದಕ್ಕಾಗಿ ದುಡಿದಿದ್ದಾರೆ. ಅದನ್ನ ಕಾಂಗ್ರೆಸ್ ಹೈಕಮಾಂಡ್ ಕೂಡ ಪರಿಗಣಿಸಿದೆ. ಜೊತೆಗೆ ಅಲ್ಪಸಂಖ್ಯಾತರಿಗೆ ಕೇಳುವ ಹಕ್ಕಿದೆ ಕೇಳಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನ ಎದುರಿಸುತ್ತೀವಿ ಎಂಬ ಮಾತನ್ನ ಎಸ್ ಎಸ್ ಮಲ್ಲಿಕಾರ್ಜುನ ಅವರು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...