Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಮಿಸ್ : ಮೊದಲೇ ಎಚ್ಚರಿಕೆ ನೀಡಿತ್ತಾ ದೈವ..?

Facebook
Twitter
Telegram
WhatsApp

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಲವರಿಗೆ ಟಿಕೆಟ್ ಕೈತಪ್ಪಿದೆ. ಎರಡನೇ ಪಟ್ಟಿಯಲ್ಲೂ ಹಾಲಿ ಸಂಸದರಿಗೆ ಟಿಕೆಟ್ ಸಿಕ್ಕಿಲ್ಲ. ಇದು ಹಿರಿಯರ ಬೇಸರಕ್ಕೆ ಕಾರಣವಾಗಿದೆ. ಅದರಲ್ಲೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ನಳೀನ್ ಕುಮಾರ್ ಕಟೀಲ್ ಅವರಿಗೂ ಈ ಅಬರಿ ಟಿಕೆಟ್ ಮಿಅ್ ಆಗಿದೆ. ನಳೀನ್ ಕುಮಾರ್ ಕಟೀಲು ಅವರ ರಾಜಕೀಯ ಜೀವನದಲ್ಲಿ ಹಿಂಗೆ ಆಗುತ್ತೆ ಎಂಬುದಾಗಿ ದೈವ ಈ ಮೊದಲೇ ಭವಿಷ್ಯ ನುಡಿದಿತ್ತು. ಇದೀಗ ಆ ವಿಡಿಯೋ ವೈರಲ್ ಆಗಿದೆ.

 

ನಳೀನ್ ಕುಮಾರ್ ಕಟೀಲು ಸುಮಾರು ಹದಿನೈದು ವರ್ಷಗಳಿಂದ ರಾಜಕೀಯ ಜೀವನವನ್ನು ಸಾಗಿಸುತ್ತಾ ಬರುತ್ತಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಬದಲಾವಣೆಗಳಾಗಲಿವೆ ಎಂದು ಅಂದು ದೈವ ನುಡಿದಿತ್ತು. ಒಂದು ವಾರಗಳ ಹಿಂದಷ್ಟೇ ರಾಜಕೀಯ ಜೀವನ ಏನಾಗಲಿದೆ ಎಂಬುದರ ಕುರಿತು ಎಚ್ಚರಿಕೆ ನೀಡಿತ್ತು. ಅಷ್ಟಕ್ಕೂ ದೈವ ನುಡಿದ ಭವಿಷ್ಯವೇನಾಗಿತ್ತು..? ನಳೀನ್ ಕುಮಾರ್ ಅವರು ಯಾವ ಎಚ್ಚರಿಕೆಯನ್ನು ಪಾಲನೆ ಮಾಡಬೇಕಿತ್ತು..? ಎಂಬ ವರದಿ ಇಲ್ಲಿದೆ‌

ನಳೀನ್ ಕುಮಾರ್ ಕಟೀಲ್ ಅವರು ನೇಮೋತ್ಸವದಲ್ಲಿ ಭಾಗಿಯಾಗಿದ್ದರು. ವಯನಾಟ್ ಕುಲವನ್ ದೈವದ ನೇಮೋತ್ಸವದ ವಿಷ್ಣುಮೂರ್ತಿ ದೈ ವ ಸೂಚನೆ ನೀಡಿತ್ತು. ‘ನಿನಗೆ ವೈರಿಗಳು ಇದ್ದಾರೆ. ವೈರಿಗಳು ಎಷ್ಟಿದ್ದರೇನು..? ಕಿನೆಗೆ ಸತ್ಯ, ಧರ್ಮ ಮಾತ್ರ ಗೆಲ್ಲುವುದು. ನೀನು ಹಿಂತಿರುಗಿ ನೋಡಬೇಡ. ನಿನಗೆ ಮುಂದೊಂದು ದಿನ ಜಯವಿದೆ’ ಎಂದು ದೈವ ನುಡಿದಿತ್ತು.

ಆದರೆ ನಳೀನ್ ಕುಮಾರ್ ಕಟೀಲು ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿಯೇ ಅಸಮಾಧಾನದ ಹೊಗೆಯಾಡುತ್ತಿತ್ತು. ನಳೀನ್ ಕುಮಾರ್ ಗೆ ಟಿಕೆಟ್ ನೀಡಬಾರದು ಎಂದೇ ಮನವಿ ಮಾಡಿದ್ದರು. ಜೊತೆಗೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಳೀನ್ ಕುನಾರ್ ಕಟೀಲು ವಿರೋಧ ಅಲೆ ಜೋರಾಗಿತ್ತು. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ನಿರಾಕರಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!