ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಯಾಗಿರುವ ಯಶಸ್ವಿನಿ ಯೋಜನೆಗೆ ಯಾರಾದರೂ ಇನ್ನು ಅರ್ಜಿ ಹಾಕಿಲ್ಲ ಎಂದರೆ ಅರ್ಜಿ ಹಾಕಲು ಸಮಯಾವಕಾಶವನ್ನು ನೀಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಮಾರ್ಚ್ ತಿಂಗಳ ಕೊನೆಯವರೆಗೂ ಅವಕಾಶ ನೀಡಲಾಗಿದೆ. ಹೀಗಾಗಿ ಇದರ ಲಾಭ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯಶಸ್ವಿನಿ ಕಾರ್ಡ್ ಮಾಡಿಸದೆ ಇರುವವರು ಮಾರ್ಚ್ 31ರ ತನಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ರಾಜ್ಯ ಸರ್ಕಾರದ ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಸಹಕಾರ ಸಂಘದ ಅಡಿಯಲ್ಲಿ, ಮರುಜಾರಿಗೊಳಿಸಿದೆ. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸದಸ್ಯರ ನೋಂದಣಿಗೆ ಫೆಬ್ರವರಿ ತಿಂಗಳು ಕೊನೆಯಾಗಿತ್ತು. ಆದರೆ ಇನ್ನಷ್ಟು ಜನರಿಗೆ ಅನುಕೂಲವಾಗಲೆಂದೇ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ.
ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿ ಆಗಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















