Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೈಮ್ಸ್ ನೌ ಸಮೀಕ್ಷೆ : ಕೇಂದ್ರದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ

---Advertisement---

 

ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವುದು ಗೊತ್ತೇ ಇದೆ. ಕೇಂದ್ರದಲ್ಲಿ ಸತತ ಎರಡು ಬಾರಿ ಗೆದ್ದಿರುವ ಬಿಜೆಪಿ ಮೂರನೇ ಬಾರಿಯೂ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಈಗ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಟೈಮ್ಸ್ ನೌ ನವಭಾರತ್ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿ ಸ್ವಂತ ಬಲದಿಂದ 285 ರಿಂದ 325 ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಟೈಮ್ಸ್ ನೌ ಸಮೀಕ್ಷೆಯ ಪ್ರಕಾರ

►ಬಿಜಿಪಿ  285-325
►ಕಾಂಗ್ರಸ್ 111-149
►ತೃಣಮೂಲ ಕಾಂಗ್ರೆಸ್ 20-22
►ವೃಎಸ್ ಆರ್ ಸಿ ಪಿ 24-25
►ಬಿಜೆಡಿ 12-14
►ಬಿಆರ್ ಎಸ್  9-11
►ಅಮ್ ಆದ್ಮಿ ಪಕ್ಷ  4-7
►ಸಮಾಜವಾದಿ ಪಕ್ಷ.. 4-8
► ಇತರೆ.. 18-38 ಸ್ಥಾನಗಳು ಬರುವ ಸಾಧ್ಯತೆ ಇದೆ.

ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ ಅಧಿಕಾರಕ್ಕೆ ಬರಬೇಕಾದರೆ ಕನಿಷ್ಠ 272 ಸ್ಥಾನಗಳನ್ನು ಗೆಲ್ಲಬೇಕು. ಕಳೆದ ಎರಡು ಅವಧಿಗಳಲ್ಲಿ ಅಂದರೆ 2014 ಮತ್ತು 2019ರಲ್ಲಿ ಬಿಜೆಪಿ ಸ್ವಂತ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಎನ್‌ಡಿಎ ಮಿತ್ರಪಕ್ಷಗಳಾಗಿ ಹೆಚ್ಚಿನ ಪಕ್ಷಗಳನ್ನು ಮುನ್ನಡೆಸಿತು. ಚುನಾವಣೆಗೆ ಇನ್ನೂ 10 ತಿಂಗಳು ಬಾಕಿ ಇದೆ. 9 ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿದ್ದರೂ.. ಮೋದಿ ಸರಕಾರ ಇನ್ನೂ ಬಲಿಷ್ಠವಾಗಿದೆ. ಟೈಮ್ಸ್ ನೌ ನವಭಾರತ್ ಸಮೀಕ್ಷೆಯ ಸಾರಾಂಶವೆಂದರೆ ಸರ್ಕಾರದ ವಿರೋಧಿ ಅಲೆಯ ಹೊರತಾಗಿಯೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದ ರಾಹುಲ್ ಗಾಂಧಿಗೆ ಕಾಂಗ್ರೆಸ್‌ಗೆ ಬೇಕಾದಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಸಮೀಕ್ಷೆ ಹೇಳಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದರೂ ರಾಹುಲ್ ಪ್ರಭಾವ ಇನ್ನೂ ದೇಶದ ರಾಜಕೀಯದಲ್ಲಿ ಬಂದಿಲ್ಲ ಎಂದಿದೆ. ಈಗಿಂದೀಗಲೇ ಚುನಾವಣೆ ನಡೆದರೆ ಕಾಂಗ್ರೆಸ್ 111 ರಿಂದ 149 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment