Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವಾದದ ನಡುವೆಯೂ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ

Facebook
Twitter
Telegram
WhatsApp

ಹುಬ್ಬಳ್ಳಿ: ಈದ್ಗಾ ಮೈದಾನ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದೆ. ಈ ವರ್ಷ ಗಣೇಶ ಚತುರ್ಥಿಯನ್ನು ಈದ್ಗಾ ಮೈದಾನದಲ್ಲಿ ಮಾಡಿಯೇ ತೀರುತ್ತೀವಿ ಎಂದು ಹಿಂದೂ ಪರ ಸಂಘಟನೆಗಳು ಹಠ ತೊಟ್ಟಂತೆ ಆಚರಣೆ ಮಾಡಿದ್ದವು. ಇದೀಗ ಹಲವು ವಿವಾದದ ನಡುವೆ ಟಿಪ್ಪು ಜಯಂತಿಯನ್ನು ಆಚರಣೆ ಮಾಡಿದ್ದಾರೆ.

AIMIM ಜಿಲ್ಲಾ ಕಾರ್ಯದರ್ಶಿ ವಿಜಯ್ ನೇತೃತ್ವದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ ಮಾಡಲಾಗಿದೆ. ಟಿಪ್ಪು ಭಾವಚಿತ್ರವನ್ನು ಇಟ್ಟು, ಅದಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಟಿಪ್ಪು ಜಯಂತಿಯನ್ನು ಆಚರಣೆ ಮಾಡಿದ್ದಾರೆ. ಜೊತೆಗೆ ಟಿಪ್ಪು ಬಗ್ಗೆ ಘೋಷಣೆಯನ್ನು ಕೂಗಿದ್ದಾರೆ. ಸಮತಾ ಸೈನಿಕ ಸಂಘಟನೆಯಿಂದಲು ಟಿಪ್ಪು ಜಯಂತಿ ಆಚರಣೆಗೆ ಬೆಂಬಲ ವ್ಯಕ್ತವಾಗಿದೆ.

ಕಾರ್ಯಕ್ರಮದ ನಡುವಲ್ಲಿ ಮಾತನಾಡಿದ ವಿಜಯ್, ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಮಾಡಲು ಅನುಮತಿ ಕೊಟ್ಟಾಗ ನಾವೂ ಸುಮ್ಮನಿದ್ದೆವು. ಆದ್ರೆ ಟಿಪ್ಪು ಜಯಂತಿಗೆ ಅನುಮತಿ ಕೊಟ್ಟಾಗ ಯಾಕೆ ವಿರೋಧ ಮಾಡುತ್ತಾರೆ. ಪ್ರಮೋದ್ ಮುತಾಲಿಕ್ ಓರ್ವ ಮತಾಂಧ. ಜಯಂತಿ ಆಚರಣೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಟಿಪ್ಪು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!