Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತಮಿಳುನಾಡು ಸರ್ಕಾರದ ವಿರುದ್ಧ ಸಮರ ಸಾರಿದ ಅಣ್ಣಾಮಲೈ : ದೊಡ್ಡ ಟ್ರಂಕ್ ನಲ್ಲಿ ಬಂತು ಕಡತಗಳು..!

---Advertisement---

 

 

ತಮಿಳು ನಾಡು ರಾಜಕೀಯದಲ್ಲಿ ಬೇನಾಮಿ ಆಸ್ತಿ ಸಂಪಾದನೆಯ ಸದ್ದು ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಡಿಎಂಕೆ ಪಕ್ಷದ ಶಾಸಕರು, ಸಚಿವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬೇನಾಮಿ ಆಸ್ತಿಯ ವಿರುದ್ದ ಟ್ರಂಕ್ ನಲ್ಲಿ ಕಡತಗಳನ್ನು ತಂದಿದ್ದಾರೆ. ಡಿಎಂಕೆ ಸರ್ಕಾರದಲ್ಲಿ 5,600 ಕೋಟಿಯ ಮೊತ್ತದ ಮೂರು ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

ಇಂದು ಅಣ್ಣಾಮಲೈ ನೇತೃತ್ವದಲ್ಲಿ ನಿಯೋಗ ತಮಿಳುನಾಡಿನ ರಾಜ್ಯಪಾಲರ ಭೇಟಿ ಮಾಡಿದೆ. ರಾಜ್ಯಪಾಲರಾದ ಆರ್ ಎನ್ ರವಿ ಅವರಿಗೆ ದೂರು ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ದೊಡ್ಡ ಟ್ರಂಕ್ ಗಳಲ್ಲಿ ಎಳೆದು ತಂದಿದ್ದಾರೆ. ಈ ವೇಳೆ ರಾಜ್ಯಪಾಲರಿಗೆ ಮಾಹಿತಿ ನೀಡಿದ ಅಣ್ಣಾಮಲೈ, ಡಿಎಂಕೆ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ. ಶಾಸಕರು, ಸಂಸದರು, ಸಚಿವರು ಅವರ ಕುಟುಂಬಸ್ಥರು ಕೋಟಿ ಕೋಟಿ ಲೆಕ್ಕದಲ್ಲಿ ಬೇನಾಮಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಣ್ಣಾಮಲೈ ಅವರು, ನಾವು ರಾಜ್ಯಪಾಲರಿಗೆ ಡಿಎಂಕೆ ಫೈಲ್ಸ್ ಪಾರ್ಟ್‌ 2 ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದಿದ್ದಾರೆ. ಇಂದು ಅಣ್ಣಾಮಲೈ ಅವರು ಇದೇ ಜುಲೈ 28ರಿಂದ 10 ತಿಂಗಳ ಕಾಲ ಸಿಂಹವಾಹನಂ ಹೆಸರಲ್ಲಿ ಬೃಹತ್ ಪಾದಯಾತ್ರೆ ಹೊರಟಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯೋ ನಡೆಯೋ ಈ ಪಾದಯಾತ್ರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...