Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿಶೇಷ ವ್ಯಕ್ತಿಯಾಗಬೇಕಾದರೆ ಇತಿಹಾಸದ ಪ್ರಜ್ಞೆ ಇರಬೇಕು : ಶ್ರೀ ಬಸವಪ್ರಭು ಸ್ವಾಮಿಗಳು

---Advertisement---

 

ಚಿತ್ರದುರ್ಗ, ಸೆ. 09: 12ನೇ ಶತಮಾನಕ್ಕೆ ದೊಡ್ಡ ಇತಿಹಾಸವಿದೆ. ಇಡೀ ವಿಶ್ವಕ್ಕೆ ಕಾಯಕ, ದಾಸೋಹ  ಸಮಾನತೆಯ ಪರಿಕಲ್ಪನೆಯ ಇತಿಹಾಸವನ್ನು ನೀಡಿದವರು ಬಸವಾದಿ ಪ್ರಮಥರು ಎಂದು ಶ್ರೀ ಬಸವಪ್ರಭು ಸ್ವಾಮಿಗಳು ನುಡಿದರು.

ನಗರದ ಹೋಟೆಲ್ ರವಿಮಯೂರದಲ್ಲಿ ನಡೆದ ನಿತ್ಯಕಲ್ಯಾಣ ಮನೆ ಮನೆಗೆ ಚಿಂತನ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಇತಿಹಾಸ ಪ್ರಜ್ಞೆಯನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ವಿಶೇಷ ವ್ಯಕ್ತಿಯಾಗಬೇಕಾದರೆ ಇತಿಹಾಸದ ಪ್ರಜ್ಞೆ ಇರಬೇಕು. ಬಸವಣ್ಣನವರ ನೇತೃತ್ವದಲ್ಲಿ ವರ್ಗ, ವರ್ಣರಹಿತ ಸಮಾಜ ನಿರ್ಮಿಸಿದರು.

12ನೇ ಶತಮಾನದಲ್ಲಿ ಬೇಡುವವರು ಇರಲಿಲ್ಲ ಕಾರಣ ಎಲ್ಲರೂ ಕಾಯಕ ಜೀವಿಗಳಾಗಿದ್ದರು. ಬೇಡುವವರಿಲ್ಲದ ಸಮಾಜವನ್ನು ನಿರ್ಮಿಸಿದ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ. ಇದೊಂದು ಇತಿಹಾಸ. ವಚನಸಾಹಿತ್ಯ ಪ್ರಸ್ತುತ ದಿನಮಾನಗಳಲ್ಲಿ ವಿಶ್ವಕ್ಕೆ ಮಾದರಿ ಸಾಹಿತ್ಯವಾಗಿದೆ ಎಂದು ಹೇಳಿದರು.

ಬಿ. ವಿಶ್ವನಾಥ್ ಐತಿಹಾಸಿಕ ದೃಷ್ಟಿ ವಿಷಯ ಕುರಿತು ಮಾತನಾಡುತ್ತ, ಇತಿಹಾಸದ ಅರಿವು ಇರುವವರು ಇತಿಹಾಸ ಸೃಷ್ಟಿಸುತ್ತಾರೆ. ಚಿತ್ರದುರ್ಗ ಮುರುಘಾಮಠವನ್ನು ಐತಿಹಾಸಿಕ ಮಠ ಎಂದು ಕರೆಯುತ್ತೇವೆ. ಇತಿಹಾಸ ನಮ್ಮ ಸಂಸ್ಕøತಿಯನ್ನು ಬದಲಾಯಿಸುತ್ತದೆ. ಪ್ರತಿಯೊಂದುಕ್ಕು ಇತಿಹಾಸ ಇದೆ. ಕನ್ನಡಕ್ಕೆ ತನ್ನದೇ ಆದ ಇತಿಹಾಸ ಇದೆ. ಗಾಂಧೀಜಿಯವರು ನಮ್ಮ ಇತಿಹಾಸದ ವ್ಯಕ್ತಿಯಾಗಿ ಕಾಣುತ್ತಾರೆ. ಭಾರತ ದೇಶ ಇನ್ನೂ ಉಳಿದುಕೊಂಡಿರುವುದು ನಮ್ಮ ಶ್ರೀಮಂತ ಪರಂಪರೆ ಕಾರಣ. ಹಾಗಾಗಿ ನಮ್ಮ ದೇಶ ಐತಿಹಾಸಿಕವಾಗಿ ಉಳಿದುಕೊಂಡಿದೆ ಎಂದರು.

ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಮಾತನಾಡಿ, ಸಂಪದ್ಭರಿತವಾದ ಇತಿಹಾಸವಿರುವ ಭಾರತವನ್ನು ಒಂದು ಸಾವಿರ ವರ್ಷಗಳ ಕಾಲ ಪರಕೀಯರು ಆಳಿದ್ದಾರೆ. ಆದರೆ ನಮ್ಮ ಸಂಪ್ರದಾಯವನ್ನು ಭಾರತೀಯರು ಬಿಡಲಿಲ್ಲ. ಆ ಸಂಸ್ಕøತಿಯನ್ನು ಇಂದಿಗೂ ಸಹ ಉಳಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮ ದಾಸೋಹಿಗಳಾದ ಪ್ರಸನ್ನಕುಮಾರ್, ಡಾ. ನಾಗಭೂಷಣ, ಶ್ರೀಮತಿ ತ್ರಿವೇಣಿ ಪ್ರಸನ್ನಕುಮಾರ್,
ಜಮುರಾ ಕಲಾವಿದರು ವಚನ ಪ್ರಾರ್ಥನೆ ಮಾಡಿದರು. ಟಿ.ಪಿ. ಜ್ಞಾನಮೂರ್ತಿ ಸ್ವಾಗತಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...